Headlines

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಬಳಿ ನಡೆದಿದೆ. ಆನಂದಪುರ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ. ಮಂಗಳೂರಿನಿಂದ ರಾಣೆಬೆನ್ನೂರಿಗೆ ಹೋಗುವ ಗ್ಯಾಸ್ ಸಿಲಿಂಡರ್ ತುಂಬಿದ  ಲಾರಿ ಗೌತಮಪುರ ಸಮೀಪದ ಬೀರನ ಕಣವಿಯ ತಿರುವಿನಲ್ಲಿ ಪಲ್ಟಿಯಾಗಿದೆ. 372 ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿಕೊಂಡು ಹೋಗುತಿದ್ದ ಲಾರಿ ಚಾಲಕ…

Read More

ಅಂತೂ ಪತ್ತೆಯಾಯ್ತು ಕೂಡ್ಲಿಗಿಯಲ್ಲಿ ನೀರುಪಾಲಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ :

  ಶಿವಮೊಗ್ಗ : ಕೂಡ್ಲಿಯಲ್ಲಿ ನೀರುಪಾಲಾಗಿದ್ದ ಹರೀಶ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ನೀರುಪಾಲಾದ ಹರೀಶ್ ಮೃತದೇಹ ಮೂರು ದಿನಗಳವರೆಗೆ ಪತ್ತೆಯಾಗಿರಲಿಲ್ಲ.ಸತತ ಶೋಧಕಾರ್ಯದ ಪರಿಣಾಮ ಇಂದು ಸಂಜೆ ಆತನ ಮೃತದೇಹ ಪತ್ತೆಯಾಗಿದೆ. ಮಡಿಕೆ ಚೀಲೂರಿನ ಬಳಿ ಹರೀಶ್ ಮೃತದೇಹ ಪತ್ತೆಯಾಗಿದೆ. ಭಾನುವಾರ ಪಿತೃಪಕ್ಷದ ಸ್ನಾನಕ್ಕೆ ಕೂಡಲಿಯ ಸಂಗಮಕ್ಕೆ ಬಂದಿದ್ದ ಬೀರೂರಿನ ಪಿನಿಯಾಚಾರ್ ಕುಟುಂಬದ ಹರೀಶ್ (24) ನೀರಿಗೆ ಇಳಿದಾಗ ಕೊಚ್ಚಿಹೋಗಿದ್ದನು. ಮೃತದೇಹವನ್ನು ಅಗ್ನಿಶಾಮಕ ದಳದವರು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ಹಸ್ತಾಂತರಿಸಿದ್ದಾರೆ.

Read More

ಹೊಸನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನಿಧಿ ಸಂಗ್ರಹಣೆಗಾಗಿ ಮೆರವಣಿಗೆ :

ಹೊಸನಗರ ಪಟ್ಟಣದ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ, ಭಾನುವಾರ ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ಕೊಲೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಪ್ರಮುಖ ಅಂಗಡಿ, ಹೋಟೆಲ್ ಗಳಲ್ಲಿ ನಿಧಿ ಸಂಗ್ರಹಣೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಅಂಬೈಡ್ಕರ್ ನಿಗಮದ ನಿರ್ದೇಶಕ ಎನ್.ಆರ್ ದೇವಾನಂದ್,ಬಿ.ಜೆ.ಪಿ.ಮುಖಂಡರು ಸೇರಿದಂತೆ, ವಿಶ್ವ ಹಿಂದೂ ಪರಿಷತ್ತ್ ಮತ್ತು ಭಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ : ಫುಷ್ಪಾ ಜಾಧವ್

Read More

KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ

ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ  ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ  ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.  ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…

Read More

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು  -ಡಾ|| ಧನಂಜಯ ಕೆ .ಬಿ. ರಿಪ್ಪನ್‌ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ  ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು.  ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ  ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ  ರಾಜ್ಯ ಮುಂಗಡ…

Read More

ಬಿಗ್ ಬಾಸ್ ಕನ್ನಡ ಫೈನಲ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಂಟೆಸ್ಟೆಂಟ್ – ವಿನ್ನರ್ ಯಾರಾಗ್ತಾರೆ…????|BIG BOSS

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮತ್ತು ನಾಳೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದರಲ್ಲೂ ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ಬರು ಟಾಪ್ 5 ನಲ್ಲಿ ಇದ್ದಾರೆ. ದಿವ್ಯ ಉರುಡುಗ ಹಾಗೂ ರಾಕೇಶ್ ಅಡಿಗ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ದಿವ್ಯ ಉರುಡುಗ ಕಳೆದ ಸೀಸನ್ ನಲ್ಲಿಯೂ ಫೈನಲಿಸ್ಟ್ ಆಗಿದ್ದರು. ಇನ್ನು ರಾಕೇಶ್ ಅಡಿಗ ಓಟಿಟಿ ಸೀಸನ್ 1 ರಲ್ಲಿ ಇದ್ದು…

Read More

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News

Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ  ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.  ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…

Read More

ರಿಪ್ಪನ್ ಪೇಟೆಯಲ್ಲಿ ‘ಗ್ರಾಮ ಒನ್‌’ ಕೇಂದ್ರಕ್ಕೆ ಚಾಲನೆ : ಒಂದೇ ಸೂರಿನಡಿ ಸಿಗಲಿದೆ 750 ಸರ್ಕಾರಿ ಸೇವೆಗಳು..!!

ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ‘ಗ್ರಾಮ ಒನ್‌’ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು,ಇದರ ಅಂಗವಾಗಿ ರಿಪ್ಪನ್ ಪೇಟೆ ಶಿವಮೊಗ್ಗ ರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ಗ್ರಾಮ ಒನ್ ಕೇಂದ್ರವನ್ನು ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್‌…

Read More

ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿ ಕೂಡಾ ಆರೋಗ್ಯಕರವಾಗಿರುತ್ತದೆ : ಎಸ್.ರುದ್ರೇಗೌಡ

ಶಿವಮೊಗ್ಗ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಯೋಗದೊಂದಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವಿಧಾನ ಪರಿಷತ್‌ ಸದಸ್ಯರಾದ ಎಸ್ ರುದ್ರೇಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಿತ್ಯ ಒತ್ತಡದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹದೊಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ನಿಜಕ್ಕೂ ಒಳ್ಳೆಯ…

Read More

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ ಸೊರಬ : ತಾಲೂಕಿನ ಆನವಟ್ಟಿ ಗ್ರಾಮದ ತಿಮ್ಮಾಪುರ ಗ್ರಾಮದಲ್ಲಿ ಖಾಲಿ ನಿವೇಶನಕ್ಕೆ ಬೇಲಿ ಹಾಕುವ ವಿಚಾರದಲ್ಲಿ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಅಣ್ಣಪ್ಪ (58) ಎನ್ನುವವರ ಪಕ್ಕದ ಮನೆಯ ರಿಜ್ವಾನ್ ಎಂಬಾತ ಕೊಡಲಿಯಿಂದ ಹಲ್ಲೆ ನಡೆಸಿ ಅಣ್ಣಪ್ಪ ದಂಪತಿಗಳಿಗೆ ಅವಾಚ್ಯ ಶಬ್ದ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ರಿಜ್ವಾನ್, ಸಹೋದರ ಕರೀಮುಲ್ಲಾ, ರುಕ್ಸನಾ ಮತ್ತು  ಶಬಾನಾ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಣ್ಣಪ್ಪನವರ…

Read More