ಸಾಗರದ ಗಣಪತಿ ಕೆರೆಯಲ್ಲಿ ನೀರುನಾಯಿ ಪ್ರತ್ಯಕ್ಷ :
ಸಾಗರದ ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಮತ್ತೆ ನೀರುನಾಯಿ ಹಿಂಡು ಪ್ರತ್ಯಕ್ಷವಾಗಿದೆ. ಜೊಂಡು ತೆಗೆದು ಸ್ವಚ್ಛವಾಗಿರುವ ಕೆರೆಯಲ್ಲಿ ಕಳೆದ ವರ್ಷವೂ ಇವು ಕಂಡುಬಂದಿದ್ದವು. ಶರಾವತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾಧ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ. ಗುಂಪು ಗುಂಪಾಗಿ ವಾಸಿಸುವ ನೀರು…