Headlines

ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ಸಾಗರ ಪ್ರಾಂತ್ಯ ವತಿಯಿಂದ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮನವಿ:

ಸಾಗರ: ಸೈನಿಕರಾಗಿ ದೇಶದ ಗೌರವ ಪೂರ್ವಕ ಸೇವೆಯನ್ನು ನಿರ್ವಹಿಸಿ ಸೇನೆಯಿಂದ  ನಿವೃತ್ತಿಯಾದ ಮಾಜಿ ಯೋಧರಿಗೆ ವ್ಯವಸಾಯದ ಉದ್ದೇಶಕ್ಕೆ ಭೂ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗಳ ಮುಖಾಂತರ  ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.      ಈ ಸಭೆಯ ನೇತೃತ್ವವನ್ನು ವಹಿಸಿದ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಭಾಷ್ ಚಂದ್ರ ತೇಜಸ್ವಿ ಮಾತನಾಡುತ್ತಾ ರಾಜ್ಯ ಸರ್ಕಾರದ ಆದೇಶವಿದ್ದರೂ ಭೂ ಮಂಜೂರಾತಿಗಾಗಿಅರ್ಜಿ ಸಲ್ಲಿಸಿದ ಸೈನಿಕರ ಅರ್ಜಿಗಳನ್ನು ಪುರಸ್ಕರಿಸದೆ ಕಾಲಹರಣ…

Read More

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಬಿ ವೈ ವಿಜಯೇಂದ್ರ ರ ಒಟ್ಟು ಆಸ್ತಿ ಎಷ್ಟು ಗೊತ್ತಾ???? ಪತ್ನಿಗೆ ಸಾಲ ಕೊಟ್ಟಿರುವ BYV ಗೆ ಸ್ವಂತ ಕಾರು ಇಲ್ಲ!!! ಈ ಸುದ್ದಿ ನೋಡಿ

ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಶಿಕಾರಿಪುರದಲ್ಲಿ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದು ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಅದರಂತೆ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತಮ್ಮ ಕುಟುಂಬದ ಆಸ್ತಿ ಎಷ್ಟು? ಅವರ ಬಳಿ ಏನೆಲ್ಲಾ ಇದೆ ಎನ್ನುವುದನ್ನು ವಿಜಯೇಂದ್ರ ಅವರು ನಾಮಿನೇಷನ್​ನಲ್ಲಿ ಮಾಹಿತಿ ನೀಡಿದ್ದಾರೆ.  ಬಿವೈ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ ಒಟ್ಟು…

Read More

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…

Read More

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಪೂಜ್ಯ ಶ್ರೀ ಡಾ|| ವೀರೇಂದ್ರ ಹೆಗಡೆ :

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು. ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು…

Read More

ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರರ ತವರು ಕ್ಷೇತ್ರದಲ್ಲಿ ಕಳ್ಳತನ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ದುಷ್ಕರ್ಮಿಗಳು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಯತ್ನಕ್ಕೂ ಕೈ ಹಾಕಿದ್ದಾರೆ ಎಂದರೆ ತೀರ್ಥಹಳ್ಳಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ?? ಇಲ್ಲವೋ ಎಂಬ ಪ್ರಶ್ನೆ ಮೂಡದೆ ಇರದು. ಘಟನೆಯ ಹಿನ್ನಲೆ: ನಿನ್ನೆ ಸಂಜೆ ತೀರ್ಥಹಳ್ಳಿ ತಾಲ್ಲೂಕಿನ…

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ:   ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ  ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…

Read More

RIPPONPETE |ಗವಟೂರಿನಲ್ಲಿ ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ

RIPPONPETE | ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಗ್ರಾಮದ ಅಲ್ ಬದ್ರಿಯಾ ಮದ್ರಸದ ನೂತನ ಕಟ್ಟಡ ಸುನ್ನಿ ಜಂ -ಇಯ್ಯಂತುಲ್ ಸಮಿತಿಯ ಸಾಗರ ರೇಂಜ್ ಅಧ್ಯಕ್ಷರಾದ ಎ ಸಿ ಮಹಮ್ಮದ್ ಫೈಜಿ ( ಕಾರ್ಗಲ್ ಉಸ್ತಾದ್) ಲೋಕಾರ್ಪಣೆಗೊಳಿಸಿದರು..ನಂತರ ಕೂರ ತಂಝಲ್ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮನುಷ್ಯನನ್ನು ಮಾನವೀಯತೆ ಪಾಠ ಕಲಿಸಿ, ಸಮಾಜದಲ್ಲಿ ಜೀವಿಸುವ ರೀತಿಯ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿ ಕೊಳ್ಳಲು ಕಲಿಸುವ ಕೇಂದ್ರಗಳಾಗಿರುವ ಮದ್ರಸ…

Read More

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು ಈಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪುತ್ರ ಅಭಿಜಯ ವಾಣಿಜ್ಯ ವಿಭಾಗದಲ್ಲಿ ಶೇ 98 ಅಂಕ ಗಳಿಸಿದ್ದ. ಆ ಖುಷಿಗೆ ಕುಟುಂಬವನ್ನು ಕಾಶ್ಮೀರ ಪ್ರವಾಸಕ್ಕೆ ಕರೆದೊಯ್ದಿದ್ದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ (47) ಮಂಗಳವಾರ ಪಹಲ್‌ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಮಂಜುನಾಥ ರಾವ್, ಇಲ್ಲಿನ ವಿಜಯನಗರ ಬಡಾವಣೆಯ ಮೂರನೇ ಕ್ರಾಸ್ ನಿವಾಸಿ. ಶಿವಮೊಗ್ಗದ ವಿದ್ಯಾಭಾರತಿ…

Read More