Headlines

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು?

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು? ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲೂ ತೂರಾಟ  ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ 30 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಅಧಿಕಾರಿ ಮುರುಗನ್ ಆಗಮಿಸಿದ್ದಾರೆ ಎನ್ನಲಾಗಿದ್ದು, ಎಡಿಜಿಪಿ ಹಿತೇಂದ್ರ ಕೂಡ ಇವತ್ತು ಆಗಮಿಸುವ ಸಾದ್ಯತೆ ಇದೆ.   ನಿನ್ನೆ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಪೊಲೀಸರು…

Read More

ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News

ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News ಹೊಲದಲ್ಲಿ ಉಳುಮೆ ಮಾಡುವಾಗ ಕೃಷಿ ಹೊಂಡದಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ನಡೆದಿದೆ. ಚೆನ್ನಳ್ಳಿ ಗ್ರಾಮದ ಮಹೇಶ್ ಎಂಬುವರ ಮಗ ಅಭಯ್ (14), ಇದೇ ಗ್ರಾಮದ ಮಾಲತೇಶ್ (26) ಮೃತ ದುರ್ದೈವಿಗಳು. ಮಹೇಶ್ ಮಾಲೀಕತ್ವದ ಟ್ರ್ಯಾಕ್ಟರ್‌ನಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಮಾಲತೇಶ್. ಇದೇ ವೇಳೆ ಮಹೇಶ್ ಮಗ ಅಭಯ್ ಟ್ರ್ಯಾಕ್ಟರ್‌ ಮೇಲೆ ಕುಳಿತು ಮಾಲತೇಶ್‌ ಹಿಂದೆ…

Read More

ರಿಪ್ಪನ್‌ಪೇಟೆಯಲ್ಲಿ ಕೆಂಪೇಗೌಡ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ರಥಕ್ಕೆ ಅದ್ದೂರಿ ಸ್ವಾಗತ|Ripponpet

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿಯ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಸಿದ್ಧ ದೇವಾಲಯಗಳು, ಪ್ರಸಿದ್ಧ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಕೆಂಪೇಗೌಡರ ಪುತ್ಥಳಿ ಕೆಳಗೆ ಇಡಲಾಗುವುದು. ಈ ಕಾರ್ಯಕ್ರಮವು ಸರ್ಕಾರದ ವತಿಯಿಂದ ನಡೆಯುತ್ತಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯುತ್ತಿದೆ. ಮೃತ್ತಿಕೆ ಸಂಗ್ರಹ ಅಭಿಯಾನ ರಥವು ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆಯೇ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ…

Read More

Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!

Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…

Read More

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.     ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…

Read More

ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…

Read More

ಹೊಸನಗರ : ಪಂಡಿತ್ ದೀನದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆ

 ಹೊಸನಗರ : ಇಂದು ಪಂಡಿತ್ ದಿನದಯಳ್ ಉಪಾಧ್ಯಾಯರ ಜಯಂತಿ ಯನ್ನು ತಾಲೂಕು   ಬಿಜೆಪಿ ಘಟಕ  ವತಿಯಿಂದ ಹೊಸನಗರ ರಿಪ್ಪನಪೇಟೆ ಹುಂಚ  ಮತ್ತು ನಗರ ದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು ಈ ಕಾರ್ಯಕ್ರಮವು  ಹೊಸನಗರ ತಾಲ್ಲೂಕಿನ ಎಲ್ಲಾ ಶಕ್ತಿ ಕೇಂದ್ರದಲ್ಲಿ ನಡೆಯಿತು ಮತ್ತು ಈ ಕಾರ್ಯಕ್ರಮವು ಪ್ರತಿ ಬೂತಿನಲ್ಲೂ ನಡೆಯಿತು.  ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎನ್ ಆರ್ ದೇವಾನಂದ್ ಪಂಡಿತ್ ದೀನದಯಾಳ ಉಪಾಧ್ಯಾಯರು ಒಬ್ಬ ಉದಾತ್ತ ಆದರ್ಶವ್ಯಕ್ತಿ ಮತ್ತು ಪ್ರಚಂಡ ಸಂಘಟನಾ ಸಾಮಾರ್ಥ್ಯವನ್ನು ಹೊಂದಿದ್ದವರಾಗಿದ್ದರು. ಅವರು ಕೇವಲ ವ್ಯಕ್ತಿಯಾಗಿರದೇ ಪ್ರತಿಯೊಂದು ರಂಗದಲ್ಲೂ…

Read More

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು !

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು ! ತೀರ್ಥಹಳ್ಳಿ: ಮೃತಪಟ್ಟ ತನ್ನ ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿಯಾದ ಘಟನೆ ಗುರುವಾರ ಶಿವಮೊಗ್ಗ ಸಮೀಪದ ಹೊಳೆಹೊನ್ನೂರು ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುವಾಗ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವು ಕಂಡಿದ್ದು, ಓರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ….

Read More

ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ಜಾಥಾ|road safety

ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು. ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು…

Read More
Exit mobile version