ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ
ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರಾಗಿರುವ ಕೆ ದೇವಂದ್ರಪ್ಪ ಇವರಿಗೆ ರಾಜ್ಯಮಟ್ಟದ ಗುರು “ಶ್ರೇಷ್ಠ ಪ್ರಶಸ್ತಿ” ಯನ್ನು ಘೋಷಿಸಲಾಗಿತ್ತು . ಆದರೆ ಕಾರಣಾಂತರಗಳಿಂದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದಲ್ಲಿ ನಡೆದ ರಾಜ್ಯ ಮಟ್ಟದ “ಕನ್ನಡ ನುಡಿ ವೈಭವ -2022” ಕಾರ್ಯಕ್ರಮಕ್ಕೆ ಕೆ ದೇವೆಂದ್ರಪ್ಪನವರು ಪಾಲ್ಗೊಳ್ಳದೇ…