Headlines

ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ಮೂವರ ಬಂಧನ : 25 ಲಕ್ಷ ರೂ ಸೀಜ್

ಚುನಾವಣೆಯ ಚಟುವಟಿಕೆಗಳ ನಡುವೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್​ ಕೂಡ ಜೋರಾಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಆನ್‌ ಲೈನ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ದಂಧೆಗೆ ಕಡಿವಾಣ ಹಾಕಿದ್ದಾರೆ.  ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್​(ipl betting) ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್​ ಪೊಲೀಸ್​ ಸ್ಟೇಷನ್​ ಪಿಐ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಟೀಂವೊಂದನ್ನ ರಚಿಸಲಾಗಿತ್ತು. ಸದ್ಯ ಈ ಟೀಂ ಕಳೆದ  15-04-2023 ರಂದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತಿದ್ದವರ ಮೇಲೆ ದಾಳಿ ನಡೆಸಿದೆ. ಇನ್ನೂ ಈ…

Read More

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಪುಟ್ಟ ಬಾಲಕನನ್ನು ಬೀಕ್ಷಾಟನೆ ಮಾಡುವಂತೆ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ಸ್ವಂತ ಅಣ್ಣನೇ ತಮ್ಮನನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ಬಾಲಕನ ಅಣ್ಣನಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಪಟ್ಟಣದ ಪಟ್ಟಣದ ವಿನಾಯಕ ವೃತ್ತದಲ್ಲಿ ವ್ಯಕ್ತಿಯೊಬ್ಬ ಪುಟ್ಟ ಬಾಲಕನನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಪತ್ರಕರ್ತ…

Read More

ಕಾಲೇಜಿನ ಕಟ್ಟಡದಿಂದ ಕೆಳಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜಿನ ಮುಂದೆ ಪೋಷಕರ ಆಕ್ರೋಶ | SMG

ಶಿವಮೊಗ್ಗ ಇಲ್ಲಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೋರ್ವಳು ಶಾಲೆ ಕಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಆದಿಚುಂಚನಗಿರಿ ಪಿಯು ಕಾಲೇಜಿನಲ್ಲಿ ಈ ಅವಘಡ ನಡೆದಿದ್ದು ಮೇಘನಾ (18) ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.  ಮೃತ ವಿದ್ಯಾರ್ಥಿನಿ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಮೂಲದವರಾಗಿದ್ದಾರೆ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ವಾಶ್ ರೂಂಗೆ ಹೋಗುವುದಾಗಿ ಹೇಳಿ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಸಿಬ್ಬಂದಿಯು ಅವರ ಜೊತೆಗಿದ್ದರು ಎಂಬ ಮಾಹಿತಿಯಿದೆ.  ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು  ಕಾಲೇಜಿನ…

Read More

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್ | Soraba

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್  ಪುಟ್ಟ ಬಾಲಕಿಯೊಬ್ಬಳು ಬೀದಿ ನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಬಾಲಕಿಯೊಬ್ಬಳು ಮನೆಯ ಬಾಗಿಲು ತೆರೆದುಕೊಂಡು ಹೊರಕ್ಕೆ ಬರುತ್ತಾಳೆ. ರಸ್ತೆಯ ಇನ್ನೊಂದು ಬದಿಗೆ ಹೋಗಬೇಕಿದ್ದ ಬಾಲಕಿ ಗುಡುಗುಡು ಅಂತಾ ಓಡಿ ಬರುತ್ತಾಳೆ. ಇತ್ತ ಇನ್ನೊಂದು ಬದಿಯಲ್ಲಿ ನಾಲ್ಕು ಬೀದಿ ನಾಯಿಗಳು ನಿಂತಿರುತ್ತವೆ. ಇವುಗಳ ಪೈಕಿ…

Read More

ರಿಪ್ಪನ್‌ಪೇಟೆ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ವಿರುದ್ದ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ|protest

ರಿಪ್ಪನ್‌ಪೇಟೆ : 16-06-2023 ರಂದು ವಾಟ್ಸಪ್ ಗ್ರೂಫ್‌ಗಳಲ್ಲಿ ತೀರ್ಥಹಳ್ಳಿಯ ಪ್ರತಿಷ್ಠಿತ ಕಾಲೇಜು ಯುವತಿಯರ ಅಶ್ಲೀಲ ನಗ್ನ ಚಿತ್ರಗಳನ್ನು ಹರಿಬಿಡಲಾಗಿದ್ದು, ವಿಡಿಯೋದಲ್ಲಿ ABVP ವಿದ್ಯಾರ್ಥಿ ಸಂಘಟನೆಯ ತೀರ್ಥಹಳ್ಳಿ ಘಟಕದ ಅಧ್ಯಕ್ಷನೂ ಕೂಡ ಇದ್ದು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆತನ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸುವಂತೆ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ನಾಡ ಕಛೇರಿಯಲ್ಲಿ ಉಪ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಗೆ ಸದಸ್ಯತ್ವ ಆಮಿಷ ತೋರಿಸಿ, ವೀಡಿಯೋ ಮಾಡಿ ದೇಹದ ನಗ್ನ ದೃಶ್ಯಗಳನ್ನು ಅಶ್ಲೀಲವಾಗಿ…

Read More

ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|Ripponpet

ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಬೆನವಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಶಾಲಾ ಮಕ್ಕಳನ್ನು ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಕರೆದೊಯ್ದು ವಾಪಾಸ್ ಶಿವಮೊಗ್ಗ ಕಡೆಗೆ ತೆರಳುತಿದ್ದ ವಿಜಯಲಕ್ಷ್ಮಿ ಬಸ್ ಹಾಗೂ ಶಿವಮೊಗ್ಗದಿಂದ ಹೊಂಬುಜ ದೇವಸ್ಥಾನಕ್ಕೆ ಹೊರಟಿದ್ದ ಮಾರುತಿ ಬಲೆನೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ…

Read More

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…

Read More

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read More

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ

ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….

Read More