ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್
ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…