ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ|ಹೀಗೊಂದು ಮನಕಲಕುವ ಘಟನೆ|accident

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೆಎಸ್‌ಆರ್‌ಟಿಸಿ ಡಿಪೊ ಸಮೀಪ ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸುದ್ದಿ ತಿಳಿದ ಯುವಕನ ಸ್ನೇಹಿತನಿಗೆ ಹೃದಯಾಘಾತವಾಗಿದೆ.  ಪುಣೇದಹಳ್ಳಿಯ ಆನಂದ (30) ಮೃತ ದುರ್ದೈವಿ. ಅಪಘಾತದಲ್ಲಿ ಆನಂದ್‌ ಮೃತಪಟ್ಟಿದ್ದರೆ,ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮೊಹಮ್ಮದ್ ಮಲ್ಲಿಕ್ (19) ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವರಾಜ್, ಜಾವೀದ್ ಎಂಬುವವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ‌…

Read More

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ಸಾಗರದಲ್ಲಿ ಇಂಜೆಕ್ಷನ್‌ ಪಡೆದ 14 ಮಕ್ಕಳು ಅಸ್ವಸ್ಥ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಹರತಾಳು ಹಾಲಪ್ಪ

ಸಾಗರ : ಜ್ವರ, ಕೆಮ್ಮು, ನೆಗಡಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ 14  ಮಕ್ಕಳು ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆಂಟಿಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.  ಕರ್ತವ್ಯದಲ್ಲಿದ್ದ ವೈದ್ಯರು ಅಸ್ವಸ್ಥಗೊಂಡ 14 ಮಕ್ಕಳಲ್ಲಿ 4 ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ…

Read More

ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ

ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರದ ಸಮೀಪ ಸಾಗರ – ತೀರ್ಥಹಳ್ಳಿಯ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಲ್ಲೂರಿನ ನಿವಾಸಿಯಾದ ಆದರ್ಶ ಎಂಬುವವರು ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ಬಂದು ವಾಪಾಸ್ಸಾಗುವಾಗ ಸಂಧರ್ಭದಲ್ಲಿ ಸಾಗರ- ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರು ಘಟನೆ ನಡೆದಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕನು ಅದೃಷ್ಟಶಾವತ್ ಪಾರಾಗಿದ್ದು ಯಾವುದೇ ರೀತಿಯಾದ ಹಾನಿಯಾಗಿಲ್ಲ. ಘಟನೆಯ ಕುರಿತು ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್|JDS

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಸಿ ಎಂ ಇಬ್ರಾಹಿಂ ರವರು ಗೌರವಯುತವಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋಗಲಿ ಅದನ್ನು ಹೊರತುಪಡಿಸಿ ಯಾರದೋ ಮನೆಯಲ್ಲಿ ಯಜಮಾನಿಕೆ ನಡೆಸಲು ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಹೇಳಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿ…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಬಂಗಾರಪ್ಪ ಅಭಿಮಾನಿ ಬಳಗದಿಂದ ಅಮೀರ್ ಹಂಜಾ ಸ್ಪರ್ಧೆ:

ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್…

Read More

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More
Exit mobile version