ತೀರ್ಥಹಳ್ಳಿಯ ಯುವ ಸಾಹಿತಿ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ರಶ್ಮಿ ಸನಿಲ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ :

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ತೀರ್ಥಹಳ್ಳಿಯ ಯುವ ಸಾಹಿತಿ ಹಾಗೂ ಪತ್ರಕರ್ತ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ ರವರಿಗೆ  ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಪೋತೆರ ಮಹದೇವು ಹಾಗೂ ಮುಖ್ಯ ಅತಿಥಿಗಳಾದ ನಾಗರತ್ನಮ್ಮ,ಹುಲಿಯೂರುದುರ್ಗ ಲಕ್ಷೀ ನಾರಾಯಣ್,ಡಾ ಶಿವರಾಜ್ ಗೌಡ, ಹೆಚ್…

Read More

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು  ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…

Read More

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ ರಿಪ್ಪನ್ ಪೇಟೆ :  ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ರಿಪ್ಪನ್ ಪೇಟೆ ರೋಟರಿ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷ ಎಂ ಬಿ. ಲಕ್ಷ್ಮಣಗೌಡ ದಂಪತಿಗಳು ಈ ತಿಂಗಳು ಅಮೆರಿಕಾದ ವರ್ಜೀನಿಯಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ 12ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಬಿ ಲಕ್ಷ್ಮಣಗೌಡ ಅಮೆರಿಕಾದಲ್ಲಿ ನಡೆಯುವ ಅಕ್ಕ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read More

ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನಿಂದ ಸರಣಿ ಅಪಘಾತ – ತಪ್ಪಿದ ಭಾರಿ ಅನಾಹುತ|accide

ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನಿಂದ ಸರಣಿ ಅಪಘಾತ – ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಡಿಕ್ಕಿಯಾಗಿ ನಂತರ ಕಾರು ಹಲಸಿನ ಮರಕ್ಕೆ  ಹೊಡೆದ ಘಟನೆ ತಾಲೂಕಿನ ರಾಮಕೃಷ್ಣಪುರ ಸಮೀಪದಲ್ಲಿ ಸೋಮವಾರ ಸಂಭವಿಸಿದೆ. ಜನನಿಬಿಡ ಪ್ರದೇಶವಾದ ಇಲ್ಲಿ ಅದೃಷ್ಟವಶಾತ್ ಅಪಘಾತ ನಡೆಯುವ ಸಂಧರ್ಭದಲ್ಲಿ ಯಾರು ಇಲ್ಲದೇ ಇದ್ದದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಮ್ಮರಡಿಯ ಮಾನಪ್ಪ ಎಂಬುವರ ಕಾರು ಅಪಘಾತಕ್ಕೆ ಒಳಗಾಗಿದ್ದು ಕಾರು…

Read More

ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ

ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ  ಹೊಂದಿದ  ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಶಾರದಾ ರವರು ಹೇಳಿದರು. ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.  ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು.  ಕ್ಷೇತ್ರ…

Read More

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ. ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ…

Read More

ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಗೆ ಕಂಟಕಪ್ರಾಯವಾಗಿರುವ ಕಟ್ಟಡ – ತೆರವುಗೊಳಿಸಲು ಮುಂದಾಗುತ್ತಾರ ಅಧಿಕಾರಿಗಳು – ಜನಹಿತಕ್ಕಾಗಿ | The building is a thorn in the development of Ripponpet town

ಜನಹಿತಕ್ಕಾಗಿ ಯಾವುದೇ ಒಂದು ಗ್ರಾಮ, ನಗರದ ಅಭಿವೃದ್ಧಿಗೆ ಆ ಭಾಗವನ್ನು ಪ್ರತಿನಿಧಿಸುವ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು,ಅಧಿಕಾರಿ ಜೊತೆ ಗ್ರಾಮಸ್ಥರ ಸಹಕಾರ ಇದ್ದಾಗ ಮಾತ್ರ ನಿರೀಕ್ಷಿತ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯ­ವಾಗುತ್ತದೆ. ಅದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆ ಊರಿನ ಅಭಿವೃದ್ಧಿ ಕುಂಠಿತಕ್ಕೂ ಬೆರಳೆಣಿಕೆ ಗ್ರಾಮಸ್ಥರೇ ಕಾರಣರಾಗುತ್ತಾರೆ ಎನ್ನುವುದಕ್ಕೆ ನಮ್ಮ ಗ್ರಾಮ ನಿದರ್ಶನ’ ಎನ್ನುತ್ತಾರೆ ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿ ಪರ ಚಿಂತಕರು. ಹೌದು ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ನಾಲ್ಕು ರಸ್ತೆಗಳನ್ನು…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More

ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಶಿವಮೊಗ್ಗ ಜಿಲ್ಲಾದ್ಯಂತ ಕಳೆದೊಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವರುಣನ ಆರ್ಭಟ ಹೆಚ್ಚಾದ ಹಿನ್ನಲೆಯಲ್ಲಿ ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಶುಕ್ರವಾರವು ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ…

Read More