Headlines

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು

ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಹೊರಬಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ…

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪೂರ್ಣೇಶ್ (22) ಮೃತ ದುರ್ಧೈವಿ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕ ದಳದ…

Read More

ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…

Read More

Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭ, ಎಷ್ಟಿದೆ ದರ? ಬುಕ್‌ ಮಾಡುವುದು ಹೇಗೆ?|Airport

ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಸೀಟ್‌ ಕಾಯ್ದಿರಿಸುವ ಅವಕಾಶ ಕಲ್ಪಿಸಿದೆ. ಆ.31ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಇಂಡಿಗೋ ವೆಬ್‌ಸೈಟ್‌ನಲ್ಲಿ ಇವತ್ತು ಸಂಜೆಯಿಂದ ಬುಕಿಂಗ್‌ ಆರಂಭವಾಗಿದೆ. ಆ.31ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಆರಂಭವಾಗಲಿದೆ. ಬೆಳಗ್ಗೆ 11.05ಕ್ಕೆ ವಿಮಾನ ಶಿವಮೊಗ್ಗ ತಲುಪಲಿದೆ. 1 ಗಂಟೆ 15 ನಿಮಿಷದ ನಾನ್‌ ಸ್ಟಾಪ್‌ ಫ್ಲೈಟ್‌ ಇರಲಿದೆ ಎಂದು ಪ್ರಕಟಿಸಲಾಗಿದೆ. ಎರಡು ಬಗೆಯ ಟಿಕೆಟ್‌ ಮಾದರಿ…

Read More

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ ಸಂಘಟನೆ ಇಲ್ಲದೆ ಶಕ್ತಿ ಇಲ್ಲ – ಸುಧೀರ್ ಶೆಟ್ಟಿ He praised the progress made by the Ripponpet Buntara or Nadavara Sangha in just two years and said that the association is successfully working to unite the society through organization, cooperation and service spirit. He advised the youth to not forget…

Read More

ನಗರ : ಸುಸಜ್ಜಿತ ಬಸ್ ನಿಲ್ದಾಣಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ

Youth leader Nitin leads BJP workers and local residents in Hosangara to demand the construction of a new bus station. The existing old structure is unsafe and requires immediate government action. ಹೊಸನಗರ : ತಾಲ್ಲೂಕಿನ ನಗರ ಹೋಬಳಿಯ ದುಸ್ಥಿತಿಯಲ್ಲಿರುವ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸಲು ಆಗ್ರಹಿಸಿ ಯುವ ಮುಖಂಡ ನಗರ ನಿತಿನ್ ನೇತ್ರತ್ವದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಗರ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More