ಚೆಕ್ ಡ್ಯಾಂ ನಿರ್ಮಾಣದ ವೇಳೆ ಮಣ್ಣಿನೊಂದಿಗೆ ಸ್ಮಶಾನದಲ್ಲಿ ಹೂತಿದ್ದ ಶವಗಳನ್ನೂ ಹಾಕುತ್ತಿರುವ ಆಘಾತಕಾರಿ ಪ್ರಕರಣ ಬೆಳಕಿಗೆ : ವೀಡಿಯೋ ವೈರಲ್
ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದ ಚೆಕ್ ಡ್ಯಾಂ ನಿರ್ಮಾಣದ ವೇಳೆ ಏರಿ ಹೊಯ್ಯಲು ಮಣ್ಣಿನೊಂದಿಗೆ ಸ್ಮಶಾನದಲ್ಲಿ ಹೂತಿದ್ದ ಶವಗಳನ್ನೂ ಹಾಕುತ್ತಿರುವ ಆಘಾತಕಾರಿ ದೃಶ್ಯ ವೈರಲ್ ಆಗಿದೆ. ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹಳೇಮಂಡಿಯ ನೀರು ಶುದ್ಧೀಕರಣ ಘಟಕದ ಸಮೀಪದ ತುಂಗಾ ನದಿಗೆ ಅಡ್ಡಲಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ನಗರಕ್ಕೆ 24 ಗಂಟೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯ ಭಾಗವಾಗಿ ಈ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕಾಗಿ ಮಣ್ಣಿನ…