ಕೊಡಚಾದ್ರಿ ತಪ್ಪಲಿನಲ್ಲೊಬ್ಬ ಭ್ರಷ್ಟ ಪಿಡಿಒ : ಹಣ ಕೊಟ್ಟರೆ ಗ್ರಾಮ ಪಂಚಾಯತ್ ಕೂಡ ಮಾರಾಟ ಮಾಡುವಂತಹ ಭಂಡ ಪಿಡಿಒ
ಹೊಸನಗರ ತಾಲ್ಲೂಕಿನಲ್ಲಿ ಭೂ ಅಕ್ರಮ ಒತ್ತುವರಿದಾರರ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳೇ ಭೂ ಅಕ್ರಮ ಕಬಳಿಕೆಗೆ ಸಾಥ್ ನೀಡುತ್ತಾ ಸಾರ್ವಜನಿಕರಿಗೆ, ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ವಿಪರ್ಯಾಸದ ಸಂಗತಿ. ಇತ್ತೀಚೆಗೆ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಹಣದಾಸೆಗೆ ಬಿದ್ದು, ಬದುಕಿದ್ದವರೇ ಸತ್ತಿದ್ದಾರೆಂದು ವರದಿ ನೀಡಿ ಯಾರದ್ದೋ ಆಸ್ತಿಯನ್ನು ಮತ್ಯಾರಿಗೋ ಬರೆದುಕೊಟ್ಟಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಈ ಅಕ್ರಮವನ್ನೂ ಕೂಡಾ ಅದೇ ಪಿಡಿಓ ಮಾಡಿದ್ದಾರೆ ಎನ್ನಲಾಗುತ್ತಿದೆ….