ಸಾಗರದಲ್ಲಿ ಪ್ರತಿಭಟನಾ ನಿರತ “ಬ್ಯಾಂಕ್ ಮಿತ್ರ” ಉದ್ಯೋಗಿ ಆತ್ಮಹತ್ಯೆಗೆ ಯತ್ನ : ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬ್ಯಾಂಕ್ ಮಿತ್ರ ಉದ್ಯೋಗಿಗಳ ಪ್ರತಿಭಟನೆ
ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬ್ಯಾಂಕ್ ಮಿತ್ರರ ಸಂಘ ಮತ್ತು ಮಾನವ ಹಕ್ಕುಗಳ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ದೀವರ ಯುವ ವೇದಿಕೆ ಸಹಯೋಗದೊಂದಿಗೆ ಕೆಳದಿ ಕೆನರಾ ಬ್ಯಾಂಕ್ ನಿಂದ ಬ್ಯಾಂಕ್ ಮಿತ್ರರನ್ನು ವಜಾಗೊಳಿಸಿರುವ ನೀತಿ ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಪ್ರತಿಭಟನಾ ನಿರತ ಬ್ಯಾಂಕ್ ಮಿತ್ರ ಉದ್ಯೋಗಿ ಶಕುಂತಲಾ ಎಂಬುವವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕೂಡಲೇ ಸಹೋದ್ಯೋಗಿಗಳು ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು,ಈಗ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ…


