Headlines

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ ರಿಪ್ಪನ್ ಪೇಟೆ : ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದ್ದು, ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ ಜಿ ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು ಶಿವಮಂದಿರದಲ್ಲಿ ಆಯೋಜಿಸಲಾದ ಶಾಂತಿಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶೋತ್ಸವ ಮತ್ತು ಈದ್‌ಮಿಲಾದ್ ಹಬ್ಬಗಳು ಶಾಂತಿ…

Read More

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..!

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..! ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆಪಕ್ಕದಲ್ಲಿದ್ದ ನದಿಗೆ ಉರುಳಿದೆ. ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ….

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!!Wild corner

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!! ರಿಪ್ಪನ್‌ಪೇಟೆ : ಇಲ್ಲಿನ ಮಲ್ಲಾಪುರ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದು ಸುತ್ತಮುತ್ತಲಿನ ರೈತರನ್ನು ಭಯಭೀತರನ್ನಾಗಿಸಿವೆ. ಗವಟೂರು ಗ್ರಾಮದ ಮಲ್ಲಾಪುರದ ಎಂ.ವೈ.ನಾಗರಾಜಗೌಡ ಎಂಬುವವರ ಜಮೀನಿನಲ್ಲಿ ಇಂದು ಮುಂಜಾನೆಯಲ್ಲಿ ಕಾಡು ಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ ರೈತಾಪಿ ವರ್ಗ ಮುಂಜಾನೆ ತಮ್ಮ ತೋಟ ಮತ್ತು ಗದ್ದೆಗಳಿಗೆ ಹೋಗಿ ಬರುವ ಪದ್ದತಿ. ಆದರೆ ಇಂದು ಮುಂಜಾನೆ ಎಂದಿನಂತೆ ರೈತ ತನ್ನ ತೋಟಕ್ಕೆ ಹೋಗುವ ದಾರಿಯಲ್ಲಿ ದಿಢೀರ್ ಕಾಣಿಸಿಕೊಂಡ ಕಾಡುಕೋಣಗಳ ಹಿಂಡನ್ನು ಕಂಡು ಗಾಬರಿಯಿಂದ ಮನೆಗೆ…

Read More

84ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ | ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Former Karnataka Chief Minister B.S. Yediyurappa celebrated his 84th birthday with special prayers at Siddhivinayaka Temple in Ripponpet, as BJP leaders, workers, and supporters wished him good health and continued political strength. 84ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ | ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ: ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು 84ನೇ…

Read More

ಶಿವಮೊಗ್ಗ : ಹರಿಗೆ ಹಿಂಭಾಗದ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಹರಿಗೆ ಹಿಂಬಾಗದಲ್ಲಿ  ರೈಲ್ವೆ ಹಳಿಯ ಮೇಲೆ ಅನಾಮಧೇಯ ಶವ ದೊರೆತಿದೆ.ಸುಮಾರು 35 ವಯಸ್ಸಿನ ಅನಾಮಧೇಯ ಗಂಡಸಿನ ಶವ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದ್ದು. ಚಹರೆ ಹೀಗಿದೆ ದುಂಡು ಮುಖ ದೃಢಕಾಯ ಮೈಕಟ್ಟು  ಬಿಳಿಯ ಬಣ್ಣ ಹೊಂದಿದ್ದು  ಸಿಮೆಂಟ್ ಬಣ್ಣದ ಟೀಶರ್ಟ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಹಾಕಿಕೊಂಡಿದ್ದಾನೆ. ಒಂದು ಅಂದಾಜಿನ ಪ್ರಕಾರ ಶಿವಮೊಗ್ಗದ ಕಡೆಯಿಂದ ಭದ್ರಾವತಿಯ ಕಡೆ ಮುಖ ಮಾಡಿ ರೈಲ್ವೆ ಹಳಿಯ ಪಕ್ಕದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ರೈಲು ಡಿಕ್ಕಿ ಹೊಡೆದು…

Read More

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

ಕಾಗೋಡು ಪುತ್ರಿ ರಾಜನಂದಿನಿ ಸಿಡಿಸಿದ ಹೊಸ ಬಾಂಬ್ : ಜಿಕೆಬಿ ಗೆ ಟಿಕೆಟ್ ತಪ್ಪಿಸಲು ಉರುಳಿಸಿದ ಹೊಸ ಅಸ್ತ್ರವೇ ????

ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ  ಪ್ರಬಲ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಜನ ಇದ್ದಾರೆ. ಸಾಗರದಿಂದಲೂ ಹಲವಾರು ಆಕಾಂಕ್ಷಿಗಳು ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ಜೋರು ತಯಾರಿ ಕೂಡಾ  ನಡೆಸುತ್ತಿದ್ದಾರೆ. ಆದರೆ ಇವತ್ತು ಸಾಗರದಲ್ಲಿ  ಮಾತನಾಡಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪನವರು ಸ್ಪರ್ಧಿಸಲಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಹಾಗೂ ಅವರು ಇನ್ನೂ ಜನಸೇವೆ ಮಾಡುವ…

Read More

ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಬಿಜೆಪಿ ಪಕ್ಷ ಸದೃಢವಾಗಿದ್ದು ಅಭಿವೃದ್ದಿ ಕಾರ್ಯದಲ್ಲಿ ಈ ಹಿಂದಿನ ಸರ್ಕಾರಗಳು ಮಾಡಲಾಗದಷ್ಟು ಅಭಿವೃದ್ದಿಯನ್ನು ಕೇವಲ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಮಾಡಿದೆ. ಎಲ್ಲ ಸಮುದಾಯದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ರಿಪ್ಪನ್ ಪೇಟೆ ಹೋಬಳಿಯ ಬೂತ್ ನ ಅಧ್ಯಕ್ಷರುಗಳಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡಿದ ಅವರು ಬಿಜೆಪಿಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More