ತಮ್ಮಡಿಕೊಪ್ಪ ನಾಗ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ – ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿಗೆ ಸನ್ಮಾನ|Puc
ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ತಮಡಿಕೊಪ್ಪ ಗ್ರಾಮದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ಸ್ವಾಮಿ, ನಾಗದೇವತೆ ಮತ್ತು ನಾಗ ಕ್ಷೇತ್ರ ದೇವಸ್ಥಾನದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ಸಂಪನ್ನಗೊಂಡಿತು. ತೀರ್ಥಹಳ್ಳಿ ತಾಲ್ಲೂಕು ಮಲ್ಲೇಸರ ಗ್ರಾಮದ ನಾಗರಾಜ ಮತ್ತು ಅನುಸೂಯ ದಂಪತಿಗಳ ಪುತ್ರಿಯಾದ ಕುಮಾರಿ ಅನ್ವಿತಾ ಇವರು ಇತ್ತೀಚೆಗೆ ನೆಡೆದ ದ್ವಿತೀಯ ಪಿ ಯು ಸಿ ಪರೀಕ್ಷೆ ಯಲ್ಲಿ ಕಾಮರ್ಸ್ ವಿಭಾಗ ದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಗೆ…