ಆಸ್ತಿಗಾಗಿ ಹೆತ್ತ ತಾಯಿಯನ್ನೆ ಥಳಿಸಿ,ತಲೆ ಬೋಳಿಸಿ ಬೀದಿಗೆ ಎಸೆದ ಪಾಪಿ ಮಕ್ಕಳು :
ಹೆತ್ತ ತಾಯಿಯ ಆಸ್ತಿಯನ್ನು ಕಬಳಿಸಿ ಮನಸೋ ಇಚ್ಚೇ ಥಳಿಸಿ ಅಷ್ಟಕ್ಕೂ ತೃಪ್ತಿಯಾಗದ ಪಾಪಿ ಮಕ್ಕಳು ಸಾಕಿ ಸಲುಹಿದ ತಾಯಿಯ ತಲೆ ಬೋಳಿಸಿ ಎಸೆದಿರುವ ಘಟನೆ ನಡೆದಿದೆ. ಹೌದು ಇಂತಹ ದಾರುಣ ಘಟನೆಯೊಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆವಿನಹಳ್ಳಿ ಎಂಬಲ್ಲಿ ನಡೆದಿದೆ. 95 ವರ್ಷದ ವೃದ್ಧೆ ಸಾವಿತ್ರಮ್ಮನವರ ಕಥೆ ಇದಾಗಿದ್ದು ಈಕೆಗೆ 4ಜನ ಮಕ್ಕಳಿರುತ್ತಾರೆ. ಹಿರಿಯ ಮಗ ಶಿವರುದ್ರಯ್ಯ ಎರಡನೇ ಮಗ ಚಂದ್ರಶೇಖರಯ್ಯ. ಮೂರನೆಯವರು ಈರಮ್ಮ ಹಾಗೂ ನಾಲ್ಕನೆಯ ಪುತ್ರ ಎ.ವಿ. ಪ್ರಕಾಶ್ ಅಲಿಯಾಸ್ ಬೂದಯ್ಯ ಅಲಿಯಾಸ್…