Headlines

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

ಇಂದು (17-02-2023) ರಿಪ್ಪನ್‌ಪೇಟೆಯಲ್ಲಿ ಹೊನಲು ಬೆಳಕಿನ ಖೋಖೋ ಪಂದ್ಯಾವಳಿ|KHOKHO

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು(17-02-2023) ಸ್ವಾಮಿ ವಿವೇಕಾನಂದ ಖೋ ಖೋ ಗೆಳೆಯರ ಬಳಗದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಖೋಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಖೋಖೋ ಕ್ರೀಡಾಪಟು ಪೃಥ್ವಿ ಸ್ಮರಣಾರ್ಥ ಅಂತರ್ ಜಿಲ್ಲಾ ಮಟ್ಟದ 4ನೇ ವರ್ಷದ ಹಗಲು,ಹೊನಲು-ಬೆಳಕಿನ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಖೋಖೋ ಕ್ರೀಡಾಪಟುಗಳು ಈ ಕ್ರೀಡಾಕೂಟಕ್ಕೆ ಭಾಗವಹಿಸುತಿದ್ದು ಅತ್ಯಂತ ರೋಚಕ ಪಂದ್ಯಾವಳಿಗಳು ನಡೆಯಲಿದೆ.

Read More

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ ತೀರ್ಥಹಳ್ಳಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ. ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು…

Read More

HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಗರದ ಚಂದ್ರು ಎಂಬಾತನಿಗೆ ಸೇರಿದ(KA 19 AB 9021) ಮತ್ತು…

Read More

ಬೈಕ್ ಅಪಘಾತ : ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ.  ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ. ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್…

Read More

ಬಸವಣ್ಣನವರ ಬಗ್ಗೆ ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿ ಸರಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮೂಲೆಗದ್ದೇ ಶ್ರೀಗಳ ಪತ್ರ

ಲಿಂಗಾಯಿತ ಧರ್ಮಗುರು ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾವುಗಳು ಹೋರಾಟ ನಡೆಸಬೇಕಾಗುತ್ತದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಬಗ್ಗೆ ರಿಪ್ಪನ್‌ಪೇಟೆಯಲ್ಲಿ ಮಾಧ್ಯಮಗಳಿಗೆ ವಿವರಿಸಿ, 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರನ್ನು ಕುರಿತ ಪಾಠದಲ್ಲಿ ಕೆಲ ಬದಲಾವಣೆ ಮಾಡಿ ಪ್ರಕಟಿಸಿರುವುದನ್ನು ಕುಚೋದ್ಯದ ಸಂಗತಿ. ಈ ಅನೈತಿಕ ತಪ್ಪುಗಳನ್ನು ಸರಿಪಡಿಸಿ ಪ್ರಕಟಿಸಬೇಕು. ಇಲ್ಲದಿದ್ದರೆ…

Read More

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಹಾಗೂ ರಿಪ್ಪನ್ ಪೇಟೆ ಗ್ರಾಮಾಡಳಿತದಿಂದ ಚಿಕ್ಕಬೀರನ ಕೆರೆಗೆ ಕಾಯಕಲ್ಪ:

ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ…

Read More

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್   ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಹೇಳಿದರು ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಮಾದಕ…

Read More

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ|SSF

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ  ರಿಪ್ಪನ್‌ಪೇಟೆ : ಪಟ್ಟಣದ ಎಸ್ ಎಸ್ ಎಫ಼್ ಸಂಘಟನೆ ವತಿಯಿಂದ ತಅಝೀಜುಲ್ ಅರಬ್ಬಿಕ್ ಮದರಸ ವಿದ್ಯಾರ್ಥಿಗಳಿಂದ ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಪಟ್ಟಣದ ನಾಲ್ಕು‌ ಪ್ರಮುಖ ರಸ್ತೆಗಳಲ್ಲಿ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ವಿನಾಯಕ ವೃತ್ತದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ SSF ಸಂಘಟನೆಯಿಂದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ರ‍್ಯಾಲಿಯನ್ನು ಆಯೋಜಿಸಲಾಗಿದೆ. SSF ಸಂಘಟನೆಯು…

Read More