Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಿಪ್ಪನ್ ಪೇಟೆ ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ವ್ಯತ್ಯಯವಾಗಿರುವ ಘಟನೆ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಬೆನವಳ್ಳಿ ಗ್ರಾಮದ ತಿರುವಿನಲ್ಲಿ ಬೃಹತ್ ಮರವೊಂದು ಹೆದ್ದಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನಲೆಯಲ್ಲಿ ಕೆಲಕಾಲ ಶಿವಮೊಗ್ಗ- ರಿಪ್ಪನ್‌ಪೇಟೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು…

Read More

ಕಾರ್ ಚಾಲಕನ ಎಡವಟ್ಟು, ಚರಂಡಿಗೆ ಇಳಿದ ಖಾಸಗಿ ಬಸ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ರಿಪ್ಪನ್ ಪೇಟೆ  : ಕಾರ್ ಚಾಲಕನ ಎಡವಟ್ಟಿನಿಂದ ಸಂಭವಿಸಲಿದ್ದ ಭಾರಿ ಅಪಘಾತವೊಂದು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಗುರುವಾರದ  ಸೂಡೂರು  ನಡೆದಿದೆ. ಎದುರಿನಿಂದ ಬಂದ ಕಾರು ಚಾಲಕನೋರ್ವ ತನ್ನ ಕಾರನ್ನು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ, ಅಪಘಾತವನ್ನು ತಪ್ಪಿಸಲು ಖಾಸಗಿ ಬಸ್ಸನ್ನು ರಸ್ತೆ ಬದಿಗೆ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ – ಭಕ್ತರ ದಂಡೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕಾಗಿ ಉತ್ಸಾಹದಿಂದ ಆಗಮಿಸಿದ್ದರು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು-ಸಕ್ಕರೆಯಿಂದ ಆರಾಧನೆ, ನಾಗಬಲಿ, ಅಷ್ಟನಾಗಾರ್ಚನೆ,…

Read More

ಹಾವು ಕಚ್ಚಿ ಗೃಹಿಣಿ ಸಾವು :

ಹೊಸನಗರ  ಪಟ್ಟಣದ ಸಮೀಪದ ಮೇಲಿನಬೆಸಿಗೆ ಗ್ರಾಮದ ಮಹಿಳೆಯೊಬ್ಬಳಿಗೆ ಅಡುಗೆ ಮನೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೇಲಿನಬೆಸಿಗೆ ನಿವಾಸಿ  ನಾಗರಾಜ್ ಎಂಬುವವರ ಪತ್ನಿ ಸೌಮ್ಯ (24) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೌಮ್ಯ ಬುಧವಾರ ಮಧ್ಯಾಹ್ನ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದಾಗ ಅವರ ಕಾಲಿಗೆ ಹಾವು ಕಚ್ಚಿದ್ದು ಅವರ ಗಮನಕ್ಕೆ ಬಂದಿರಲಿಲ್ಲ.ಕೆಲ ಹೊತ್ತಿನಲ್ಲಿಯೇ ಹಾವು ಕಚ್ಚಿದ ಜಾಗದಲ್ಲಿ ತೀವ್ರತರ ಬಾಧೆಯಾಗಲು ಶುರುವಾದಗ ಮನೆಯವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮನೆಯವರು ಹಾವು ಕಚ್ಚಿರಬೇಕೆಂಬ ಶಂಕೆಯಿಂದ…

Read More

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.

Read More

ನಾಳೆ(01-05-2023) ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್|ಬೇಳೂರು ಪರ ಚುನಾವಣಾ ಪ್ರಚಾರ

ರಿಪ್ಪನ್‌ಪೇಟೆ : ದಿನಾಂಕ 0152023 ರ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಮತ ಯಾಚಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ, ಹೊಸನಗರ,ಆನಂದಪುರ ಮತ್ತು ಸಾಗರಕ್ಕೆ ಆಗಮಿಸಲಿದ್ದಾರೆ. ಇಂದು ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ರವರ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ 10.30 ಕ್ಕೆ ಹೊಸನಗರ ,ಮಧ್ಯಾಹ…

Read More

ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ.  ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು.  ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…

Read More