Headlines

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

ಕೊರೊನಾ ಭೀತಿ: ಆಗುಂಬೆ ಚೆಕ್ ಪೋಸ್ಟ್ ಬಿಗಿಗೊಳಿಸಲು ಮುಖ್ಯಮಂತ್ರಿಗಳಿಂದ ಆದೇಶ:

ತೀರ್ಥಹಳ್ಳಿ: ಕರಾವಳಿ ಭಾಗ ಹಾಗೂ ಕೇರಳದೊಂದಿಗೆ ನಿಕಟ ಸಂಪರ್ಕ ಹೊಂದಿರುವ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಥಹಳ್ಳಿಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಅನುಮತಿ ನೀಡಿದ್ದಾರೆ.  ಶಿವಮೊಗ್ಗ ಜಿಲ್ಲೆ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಇನ್ನೂ ಕೂಡಾ ಕೋವಿಡ್ ಸಂಪೂರ್ಣ ಹತೋಟಿಗೆ ಬಾರದಾಗಿದೆ ಜತೆಗೆ ಮೂರನೆಯ ಅಲೆ ಪ್ರಾರಂಭವಾಗುವ ಅನುಮಾನಗಳಿದ್ದು ತ್ವರಿತ ತಪಾಸಣೆ ಹಾಗೂ ಚಿಕಿತ್ಸೆಗೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಇದರ ಜತೆಗೆ ಆಗುಂಬೆಯಲ್ಲಿ ಚೆಕ್ ಪೋಸ್ಟ್…

Read More

ರಿಪ್ಪನ್ ಪೇಟೆ: ಶಾಸಕ ಹರತಾಳು ಹಾಲಪ್ಪರವರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಸಮಾಜದವರಿಂದ ಒತ್ತಾಯ:

 ರಿಪ್ಪನ್‌ಪೇಟೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಾಜಿ ಸಚಿವ, ಎಂಎಸ್ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಹರತಾಳು ಹಾಲಪ್ಪನವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ರಿಪ್ಪನ್‌ಪೇಟೆ ವೀರಶೈವಲಿಂಗಾಯತ ಸಮಾಜದ ಮುಖಂಡರುಗಳಾದ ಮೆಣಸೆ ಆನಂದ,ಕಮದೂರು ರಾಜಶೇಖರ್, ಹೆಚ್.ಎಸ್.ರವಿ ಹಾಲುಗುಡ್ಡೆ, ನೆವಟೂರು ದೇವೇಂದ್ರಪ್ಪಗೌಡ, ಯೋಗೇಂದ್ರಗೌಡ, ಜಿ.ಡಿ ಮಲ್ಲಿಕಾರ್ಜುನ, ಕಳಸೆ ಗಂಗಾಧರಗೌಡ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರುಗಳು ಹಾಲಪ್ಪನವರು ಹೊಸನಗರ-ಸಾಗರ-ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಸಚಿವರಾಗಿ ಕಾರ್ಯನಿರ್ವಹಿಸಿದ್ದು ಅಲ್ಲದೆ ಶಾಸಕರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು ಜಾತಿ ಭೇದ ಭಾವ…

Read More

ನಾನು ಸಚಿವ ಸ್ಥಾನದ ಆಕಾಂಕ್ಷಿ,ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಸಚಿವ ಸಂಪುಟದ ವಿಸ್ತರಣೆಯತ್ತ ಇದೀಗ ಎಲ್ಲರ ಚಿತ್ತ ಮೂಡುತ್ತಿದೆ.ಯಾರು ಯಾರಿಗೆ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಇದೀಗ ಎಲ್ಲರಲ್ಲೂ ಕಾಡುತ್ತಿರುವಂತಹ ಕುತೂಹಲ ಯಾವುದೇ ಶಾಸಕರನ್ನು ವಿಚಾರಿಸಿದಾಗ ನಾವು ಮಂತ್ರಿಯಾಗುವ ಆಸೆ ಹೊಂದಿದ್ದೇವೆ ಅವಕಾಶವೂ ಸಿಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳುವುದು ಇದೀಗ ಸಹಜವಾಗಿದೆ.   ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪನವರು ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದಲ್ಲಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ …

Read More

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ: ಕಾಡಿನಂತಾಗಿದೆ ಸಾಗರದ ಪೊಲೀಸ್ ವಸತಿ ಗೃಹಗಳು:

ಸಾಗರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿತ್ತು.ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಇದೀಗ ಕಾಡಿನ ಮಧ್ಯೆ ಇದೆ ಎಂಬಂತಾಗಿದೆ ಕಾರಣ ಸುತ್ತಮುತ್ತಲು ಕಾಡಿನಂತೆ ವಸತಿಗೃಹದ ಅರ್ಧಮಟ್ಟಿಗೆ  ಬೆಳೆದಿರುವ ಗಿಡಗಂಟಿಗಳು. ಅಧಿಕಾರಿಗಳು ಗಿಡಗಂಟಿಗಳನ್ನು ಸ್ವಚ್ಛಗೊಳಿಸದೆ ಇರುವುದರಿಂದ ಈ ವಸತಿಗೃಹಗಳ ಸೌಂದರ್ಯವೇ ಇದೀಗ ಪಾಳು ಬಿದ್ದಂತಿದೆ. ಸಾಗರದ ಹೃದಯ ಭಾಗದಲ್ಲಿ ಇರುವ ಈ ಪೊಲೀಸ್…

Read More

ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆ: ಶಾಸಕ ಹರತಾಳು ಹಾಲಪ್ಪ.

 ರಿಪ್ಪನ್ ಪೇಟೆ : ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆಯಾಗಿದ್ದು. ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ,ದಾರಿದೀಪವಾಗಿ ಮುನ್ನಡೆಸಿದ ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಸಮಾಜ ಗೌರವಿಸುತ್ತದೆ ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ಇಂದು ನಿವೃತ್ತರಾದ ಪ್ರೊ. ನಳಿನ್ ಚಂದ್ರ ಉಡುಪ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯಿಂದ  ಆಯೋಜಿಸಲಾಗಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶೈಕ್ಷಣಿಕ ಸೇವೆಯಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬರಿಗೂ ಸಹ ಸಮಾಜವು…

Read More

ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ನೀಡುವಂತೆ ತೀರ್ಥಹಳ್ಳಿ ತಾಲೂಕು ಬಿಜೆಪಿ ಮುಖಂಡರಿಂದ ಒಕ್ಕೊರಲ ಮನವಿ:

ತೀರ್ಥಹಳ್ಳಿ : ಶಾಸಕ ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ‌ ನೀಡುವಂತೆ ತಾಲೂಕಿನ 500ಕ್ಕೂ ಹೆಚ್ಚು ಬಿಜೆಪಿ ಮುಖಂಡರುಗಳು ಇಂದು ಸಂಸದರಾದ ಬಿ.ವೈ.ರಾಘವೇಂದ್ರರನ್ನುಶಿಕಾರಿಪುರದ ಪ್ರವಾಸಿಮಂದಿರದಲ್ಲಿ ಭೇಟಿ ಮಾಡಿ ಮನವಿ ಮಾಡಿದರು.  ಸತತ 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿರುವ ಸ್ನೇಹಮಯಿ ವ್ಯಕ್ತಿತ್ವದ ಆರಗ ಜ್ಞಾನೇಂದ್ರ ರವರು ಓರ್ವ ಹಿರಿಯ ಮುತ್ಸದ್ಧಿ ರಾಜಕಾರಣಿ.ಪಕ್ಷ ಅಧಿಕಾರದಲ್ಲಿರಲಿ ಬಿಡಲಿ ತಾಲೂಕಿನಲ್ಲಿ ತಮ್ಮದೇ ಕಾರ್ಯಶೈಲಿ ಹಾಗೂ ವಿಭಿನ್ನ ವ್ಯಕ್ತಿತ್ವದ ಮೂಲಕ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವುದರಲ್ಲಿ ಸಿದ್ದ ಹಸ್ತರು.ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಾ,ಪಕ್ಷ ಬಲವರ್ಧನೆಗೆ…

Read More

ತಾಳಗುಪ್ಪ: ಅರಣ್ಯೀಕರಣ ಮಾಡಿದ ಪ್ರದೇಶದಲ್ಲಿ ಘನತ್ಯಾಜ್ಯವಿಲೇವಾರಿ ಘಟಕಕ್ಕೆ ಗ್ರಾಮಸ್ಥರಿಂದ ವಿರೋಧ

 ಸಾಗರ: ಇಲ್ಲಿನ ತಾಳಗುಪ್ಪ ಹೋಬಳಿ ಕಾನಲೆ ಗ್ರಾಮದ ಸರ್ವೆ ನಂಬರ್  412 ರಲ್ಲಿ ಗ್ರಾಮಾಡಳಿತ  ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ತಯಾರಿ ನಡೆ ಸಿದ್ದು ಇದು ಅವೈಜ್ಞಾನಿಕವಾಗಿದೆ ಎಂದು ಹಿಂಡಲೆಕೊಪ್ಪ ಗ್ರಾಮಸ್ಥರು ಆರೋಪಿಸಿದ್ದಾರೆ.  ಈಗಾಗಲೇ ಜಾಗವನ್ನು ಗುರುತುಪಡಿಸಿ ನೀಲ ನಕ್ಷೆ ತಯಾರಿಸಿದೆ‌. ಆದರೆ ಕಾನ್ಲೆ ಗ್ರಾಮ ಸರ್ವೆ ನಂಬರ್ 412ರಸರ್ಕಾರಿ ಭೂಮಿಯಲ್ಲಿ ಕಸ ವಿಲೇವಾರಿ ಘಟಕ ಗುರುತಿಸಿರುವ ಜಾಗ ಹಿಂಡಲೇ ಕೊಪ್ಪ ಗ್ರಾಮದ ಕೂಗಳತೆಯ ದೂರದಲ್ಲಿ  ಇದ್ದು ಗ್ರಾಮಕ್ಕೆ ಅತ್ಯಂತ ಸಮೀಪವಿರುತ್ತದೆ. ಮತ್ತು ಈಗಾಗಲೇ ಅರಣ್ಯ ಇಲಾಖೆಯಿಂದ…

Read More

ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಸರಳ ಆಚರಣೆ:

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಆಗಸ್ಟ್ 03 ರ ಮಂಗಳವಾರ ದಂದು ನಡೆಯುವ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವನ್ನು ಕೊರೊನಾ ಕಾರಣದಿಂದಾಗಿ ರಾಜ್ಯ ಸರಕಾರದ ಆದೇಶದ ಅನ್ವಯ ಸರಳವಾಗಿ ಆಚರಣೆ ಮಾಡಲಾಗುವುದು ಎಂದು  ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು  ಪೂರ್ವಿಕರು ನಡೆದು ಬಂದಂತಯೆ ನಾವುಗಳೂ ವರ್ಷಕ್ಕೆ ಎರಡು ಬಾರಿ ಜಾತ್ರೆ ಆಚರಿಸಿಕೊಂಡು ಬಂದಿದ್ದೇವೆ….

Read More

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು

ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ…

Read More