ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ
ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…
 
                         
                         
                         
                         
                         
                         
                         
                         
                        