ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಹೆಸರು ಬರೆಸುವಲ್ಲಿ ರಿಪ್ಪನ್ ಪೇಟೆ ಗ್ರಾಪಂ ವಿಳಂಬ ನೀತಿ : ಯಾರ ಒತ್ತಡಕ್ಕೆ ಮಣಿಯುತ್ತಿದೆ ಗ್ರಾಮಾಡಳಿತ ?????
ಇಲ್ಲಿನ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ನೆನಪಿಗಾಗಿ ಪುನೀತ್ ರಾಜ್ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಕೆಲ ವಿಕೃತ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪುನೀತ್ ರಾಜಕುಮಾರ್ ಹೆಸರಿಗೆ ಬಿಳಿ ಬಣ್ಣವನ್ನು ಬಳಿದು ವಿಕೃತಿ ಮೆರೆದಿದ್ದರು. ನಂತರ ಪುನೀತ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಲವಾರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ನಂತರ ರಿಪ್ಪನ್ ಪೇಟೆ ಗ್ರಾಮಾಡಳಿತ ಮಧ್ಯ ಪ್ರವೇಶಿಸಿ ಪುನೀತ್ ರಾಜಕುಮಾರ್…


