ಅವಧೂತ ವಿನಯ್ ಗುರೂಜಿಯವರ ಜನ್ಮ ದಿನೋತ್ಸವದ ಅಂಗವಾಗಿ ರಕ್ತದಾನ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ…

Read More

ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ :

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆ. ಡಿ ಮಂಜುನಾಥ್ ಅವರು ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಡಿ.ಬಿ. ಶಂಕರಪ್ಪ ಇವರನ್ನು ಪರಾಭವ ಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Read More

ಆಗುಂಬೆ ಸಮೀಪದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು | Lighting

ಸಿಡಿಲು ಬಡಿದು ವ್ಯಕ್ತಿ ಸಾವು | lighting ತೀರ್ಥಹಳ್ಳಿ : ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಹೆಚ್ಚಾಗಿದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ. ಮೃತ ದುರ್ದೈವಿ ನಾಗೇಂದ್ರ ಬಿನ್ ಸಿನ್ ಪೂಜಾರಿ ( 40 ವರ್ಷ ) ಎಂದು ಗುರುತಿಸಲಾಗಿದ್ದು ಇವರು ಬೀದರಗೋಡು ಗ್ರಾಮದವರು.   ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ…

Read More

ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala

ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…

Read More

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್‌ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…

Read More

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More

ಸೀರೆ ಉಟ್ಟರೆ ನಳಿನ್​ ಕುಮಾರ್​ ಕಟೀಲ್​ ಹೆಣ್ಣೋ.. ಗಂಡೋ ಅಂತಾ ಗೊತ್ತಾಗಲ್ಲ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​ ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ -ಹೆಣ್ಣೋ ಎಂದು ತಿಳಿಯುದಿಲ್ಲ ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿಗೆ ಬೆಂಕಿ ಹಚ್ಚಲು ಹೋದವರು. ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ- ಹೆಣ್ಣೋ ತಿಳಿಯುವುದಿಲ್ಲ. ಕಟೀಲ್​ ಅವರು ತಮ್ಮ ಪಕ್ಷದ ಹುಳುಕನ್ನು ತಾವು ಮುಚ್ಚಿಕೊಂಡ್ರೆ ಸಾಕು, ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು…

Read More