ಬಹುಮುಖ ಪ್ರತಿಭೆ ಯುವ ಸಾಹಿತಿ ರಫಿ ರಿಪ್ಪನಪೇಟೆಯವರಿಗೆ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ಅದ್ದೂರಿ ಸನ್ಮಾನ!! ಬಲು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಯ್ತು ರಿಪ್ಪನ್ ಪೇಟೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ!!
ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯುವಸಾಹಿತಿ ಪತ್ರಕರ್ತ ರಫಿ ರಿಪ್ಪನಪೇಟೆ ಇದೀಗ ಎಲ್ಲರಿಗೂ ಕೂಡ ಚಿರಪರಿಚಿತ ಇವರ ಸಾಧನೆಗೆ,ಬರಹಕ್ಕೆ, ಸಾಹಿತ್ಯಕ್ಕೆ ಮೆಚ್ಚುಗೆ ಪಡೆದೆ ಇರುವವರು ಯಾರು ಕೂಡ ಇಲ್ಲ. ಮೊನ್ನೆ ಮೊನ್ನೆಯಷ್ಟೇ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಯುವ ಸಾಹಿತಿಯಾದ ರಫಿ ರಿಪ್ಪನ್ ಪೇಟೆ ಯವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು. ಇದೀಗ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ…