Headlines

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ – ಸಂಸದ ಬಿ ವೈ ರಾಘವೇಂದ್ರ|BYR

ಶಿವಮೊಗ್ಗ : ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಬೇಡ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಲ್ಲಿನ ವಿನೋಬನಗರದ ಪಿಎನ್‌ಟಿ ಕಾಲೊನಿಯಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಅಂಡರ್ ಪಾಸ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಸಂಚಾರಕ್ಕೆ ಅಂಡರ್ ಪಾಸ್ ಮುಕ್ತವಾಗಿದೆ. ಈ ಭಾಗದಲ್ಲಿ ಕಳೆದ 1 ವರ್ಷದಿಂದ ತಲೆದೋರಿದ್ದ ಸಮಸ್ಯೆ ಬಗೆಹರಿದಿದೆ’ ಎಂದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ…

Read More

ಶಿವಮೊಗ್ಗದ ಟಿಪ್ಪುನಗರದಲ್ಲಿ ಕೋಟಿ ರೂ ಮೌಲ್ಯದ ಶ್ರೀಗಂಧ ಪತ್ತೆ : ಆರೋಪಿ ಸೈಯದ್ ಅಪ್ಸರ್ ವಶಕ್ಕೆ

ಶಿವಮೊಗ್ಗದ ಟಿಪ್ಪುನಗರದಲ್ಲಿ ನಿನ್ನೆ ಸುಮಾರು ಒಂದು ಸಾವಿರ ಕೆಜಿ ತೂಕದ, ಅಂದಾಜು ಕೋಟಿ ರೂ ಬೆಲೆಬಾಳುವ ಭಾರೀ ಶ್ರೀಗಂಧವನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡಿದೆ. ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಡಿಸಿಎಫ್ ಶಂಕರ್ ಹಾಗೂ ಇತರೆ ಅಧಿಕಾರಿಗಳು,, ಪೊಲೀಸ್ ಇಲಾಖೆಯ ಪ್ಸ್ಪ ಪ್ರಬಾರ ಡಿವೈಎಸ್ ಪಿ, ತುಂಗಾನಗರ ಇನ್ಸ್ ಸ್ಪೆಕ್ಟರ್ ದೀಪಕ್ ಅವರ ತಂಡ ಕೈ ಜೋಡಿಸಿ ದಾಳಿ ನಡೆಸಿದಾಗ ಈ ಶ್ರೀಗಂಧ ಪತ್ತೆಯಾಗಿದೆ. ಟಿಪ್ಪುನಗರ ಸರಹದ್ದಿನ ಅಂಬೇಡ್ಕರ್…

Read More

ಆಯನೂರು ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನಕೊಪ್ಪದ ಬಳಿ  ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.   ನಿತ್ಯದ ಕೆಲಸದ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿ ಸಾವು ಸಂಭವಿಸಿರುವ ದುರಂತದ ಘಟನೆ ನಡೆದಿದೆ.  ಇದರಲ್ಲಿ ಕಾರು‌ಚಾಲಕ ಆಗಿದ್ದ ಶಿವಮೊಗ್ಗ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿ ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ಸ್ಥಳದಲ್ಲೆ ಸಾವು ಕಂಡಿರುವ ಘಟನೆ ನಡೆದಿದೆ.ಹೊನ್ನಾಳ್ಳಿ ತಾಲ್ಲೂಕಿನ ಗೋಣಗೇರೆ ನಿವಾಸಿ…

Read More

ಕಾಸ್ಪಾಡಿ ಬಳಿ ರಸ್ತೆ ಅಪಘಾತ : ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಸಾವು

ಸಾಗರ : ಇಂದು ಮುಂಜಾನೆ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಕಾಸ್ಪಾಡಿ ಕೆರೆಯ ಬಳಿ ನಡೆದ ಬಸ್ ಹಾಗೂ ಸ್ಕೂಟಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ದೀಪು ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಕಾಸ್ಪಾಡಿ ಬಳಿ ಕೆಎಸ್ಆರ್ ಟಿಸಿ ಬಸ್ ಎದುರುಗಡೆ ಬಂದ ಸ್ಕೂಟಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿತ್ತು.ಬಸ್ ನಲ್ಲಿ 28 ಜನ ಪ್ರಯಾಣಿಕರಿದ್ದರು.ಅದೃಷ್ಟವಶಾತ್ ಬಸ್ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿರಲಿಲ್ಲ.ಸ್ಥಳಿಯರ ಸಮಯ ಪ್ರಜ್ಞೆಯಿಂದ…

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ. ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್…

Read More

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ ಶಿವಮೊಗ್ಗ : ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ. ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ. ಚಿಕಿತ್ಸೆ ಪಲಿಸದೆ ಮೆಗ್ಗಾನ್‌ನಲ್ಲಿ ಪಾಲಾಕ್ಷಪ್ಪ ಮೃತಪಟ್ಟಿದ್ದಾರೆ. ಆದರೆ ಎದೆನೋವಿನಿಂದ ಬಳಲುತ್ತಿದ ವ್ಯಕ್ತಿಯೊಂದಿಗೆ ಬಂದಿದ ನಾಯಿ ತನ್ನ ಮಾಲೀಕ ಪಾಲಾಕ್ಷಪ್ಪ ಆಸ್ಪತ್ರೆಯಲ್ಲೆ ಉಳಿದಿದ್ದಾರೆಂದು ತಿಳಿದು…

Read More

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read More

ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!!|psi

ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!! ಶಿವಮೊಗ್ಗ ತಾಲೂಕಿನ ಮೂಲದ ನಳಿನಕೊಪ್ಪ ಗ್ರಾಮದ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಗದೀಶ್ ನಾಯ್ಕ್ ಪ್ರಸ್ತುತ  ಔರಾದ್ ಸ್ಟೇಷನ್ 2nd ಗಾಂಧಿ ಗಂಜ್ ಪೊಲೀಸ್ ಠಾಣೆ ಪಿಎಸ್ಐ ಆಗಿ ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.. ತಂದೆ ಈರ ನಾಯ್ಕ, ತಾಯಿ ಸಾವಿತ್ರಿ ಬಾಯಿ,ಒಬ್ಬ ಸಹೋದರ ಸಹ ಸಿವಿಲ್ ಪೊಲೀಸ್ ಸಹ ಸೇವೆ ಸಲ್ಲಿಸುತ್ತಿದ್ದಾರೆ.!ಮೃತರು ಇಬ್ಬರು ಸಹೋದರಿಯನ್ನ ಹೊಂದಿದ್ದಾರೆ ಸಹೋದರರು ಇಬ್ಬರೂ ಸಹ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ವಿಶೇಷವಾಗಿದ್ದು,ಮಗನ ಅಕಾಲಿಕ…

Read More

Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು

Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ಪಟ್ಟಣದ ಗವಟೂರು, ಬರುವೆ ಹಾಗೂ ಕೆರೆಹಳ್ಳಿ ವಾರ್ಡ್ ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತ ಯಾಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಿಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್…

Read More