ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ
ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…