ರಿಪ್ಪನ್‌ಪೇಟೆ ಗ್ರಾಪಂ ಪಿಡಿಓ ಚಂದ್ರಶೇಖರ್ ವರ್ಗಾವಣೆ|ನೂತನ ಪಿಡಿಓ ಯಾರು ಗೊತ್ತಾ…???PDO

ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಹತ್ತು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಚಂದ್ರಶೇಖರ್ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಪಂ ನಲ್ಲಿ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಧುಸೂಧನ್ ಎನ್ ನೇಮಕವಾಗಿದ್ದಾರೆ.   ರಿಪ್ಪನ್‌ಪೇಟೆ ಗ್ರಾಪಂ ಗೆ ನೂತನವಾಗಿ ವರ್ಗಾವಣೆಗೊಂಡಿರುವ ಮಧುಸೂಧನ್ ಎನ್ ಮೂಲತಃ ರಿಪ್ಪನ್‌ಪೇಟೆ ಶಬರೀಶ ನಗರದವರಾಗಿದ್ದು ಈ ಹಿಂದೆ ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿದ್ದರು.ವರ್ಗಾವಣೆಗೊಂಡಿರುವ ಪಿಡಿಓ ಚಂದ್ರಶೇಖರ್ ರವರಿಗೆ ಸದ್ಯಕ್ಕೆ ಯಾವುದೇ ಸ್ಥಳ ನಿಯೋಜನೆಯಾಗಿರುವುದಿಲ್ಲ….

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read More

ಎಳ್ಳಮವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ರಾಮತೀರ್ಥದಲ್ಲಿ ಮಿಂದೆದ್ದ ಭಕ್ತ ಸಮೂಹ

ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ  ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು. ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದೆದ್ದು, ನದಿ ತೀರದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ…

Read More

ರಿಪ್ಪನ್ ಪೇಟೆ ಮೆಸ್ಕಾಂ ಕಛೇರಿ ಎದುರು ಧರೆಗುರುಳಿದ ಮರ : ವಿದ್ಯುತ್ ಕಂಬ, ಟ್ರಾನ್ಸ್ ಫಾರಂ ಪುಡಿಪುಡಿ : ಪ್ರಾಣಾಪಾಯದಿಂದ ಪಾರಾದ ವಾಹನ ಚಾಲಕ

ಇಂದು ಸಂಜೆ ಸುರಿದ ಧಾರಾಕಾರ ಮಳೆ ಗಾಳಿಗೆ ಇಲ್ಲಿನ ಸಾಗರ ರಸ್ತೆಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹದಾಕಾರದ ಮರವೊಂದು  ರಸ್ತೆ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್ ಫಾರಂ ವಿದ್ಯುತ್ ಕಂಬ ತುಂಡಾಗಿ ಧರೆಗೆ ಉರುಳಿದ ಘಟನೆ ನಡೆದಿದೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಸಾಗರ ಕಡೆಯಿಂದ ಬರುತ್ತಿದ್ದ ಸರಕು ಸಾಗಾಣಿಕೆ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು , ಗಾಳಿ ಮಳೆಗೆ ಹೆದರಿ ವಾಹನ ನಿಲ್ಲಿಸಿ ಇಳಿದು ಹೊರ ಹೋದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ…

Read More

RIPPONPETE | ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ 

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 354ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More

ವೃಕ್ಷಮಾತೆ ತಿಮ್ಮಕ್ಕ ಸ್ಮರಣೆಗೆ ಶಿಗ್ಗಾವಿಯಲ್ಲಿ ಸಸಿ ನೆಡುವ ಮೂಲಕ ಗೌರವ

ಹಾವೇರಿ: ಜಿಲ್ಲೆಯ ಶಿಗ್ಗಾವಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸಂದರ್ಭದಲ್ಲಿ, ಶಿಗ್ಗಾವಿ ನಗರದಲ್ಲಿರುವ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಅವರ ಸ್ಮರಣಾರ್ಥವಾಗಿ ಸಸಿಗಳನ್ನು ನೆಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಸಿ ತಿಮ್ಮಕ್ಕ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ.ಎಸ್. ಪಾಟೀಲ್, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲೋಗಲ್, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ವರದಿ : ನಿಂಗರಾಜ್…

Read More

ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara

ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ…

Read More

ಶಿವಮೊಗ್ಗದ ಕವಯತ್ರಿ ಕುಮಾರಿ ನಿತ್ಯಶ್ರೀ ಗೆ ರಾಜ್ಯೋತ್ಸವ ಪ್ರಶಸ್ತಿ : ಸತತ ಮೂರು ಪ್ರಶಸ್ತಿ ಮುಡಿಗೇರಿಸಿಕೊಂಡ ಯುವ ಬರಹಗಾರ್ತಿ

ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು ನಿತ್ಯಶ್ರೀ ಆರ್ ಇವರಿಗೆ ಡಿಸೆಂಬರ್ 18ರಂದು ಮಂಡ್ಯದ ಗಾಂಧಿ ಭವನದಲ್ಲಿ  ಕಸ್ತೂರಿ ಸಿರಿಗನ್ನಡ ವೇದಿಕೆಯ  ಕವಿಗೋಷ್ಠಿಯಲ್ಲಿ ಭಾಗಿಯಾಗಿ ನಂತರ ಈ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಪೋತೆರಾ ಮಹಾದೇವು ಮತ್ತು ಮುಖ್ಯ ಅತಿಥಿಗಳಾದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣರವರು  ಡಾ. ಶಿವಕುಮಾರ್ ಮತ್ತು ಗುರುಪ್ರಸಾದ್ ವಕೀಲರು ಹಾಗೂ ಇನ್ನಿತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಉದಯೋನ್ಮುಖ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವರ್ಷದಲ್ಲಿ ಸತತ ಮೂರು…

Read More

Ripponpete | ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್

Ripponpete |  ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್  ರಿಪ್ಪನ್‌ಪೇಟೆ : ಪಟ್ಟಣದ ಬಡಾವಣೆಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆ ಗಳ ಹಾವಳಿ ನಿಯಂತ್ರಿಸಲು ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ಭಾನುವಾರ ಫಾಗಿಂಗ್‌ ಸಿಂಪರಣೆ ಕೈಗೊಂಡಿದೆ.  ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಫಾಗಿಂಗ್‌ ಯಂತ್ರ ಬಳಸಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಕಾರ್ಮಿಕರು ಬಡಾವಣೆಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮನೆಯ ಒಳಗೆ ಮತ್ತು ಹೊರಗೆ ಫಾಗಿಂಗ್‌ ಕಾರ್ಯ ನಡೆಸಿದರು. ಹೆಚ್ಚು ಸೊಳ್ಳೆ…

Read More