ಕರುಣೆಯಿಲ್ಲದ ಗ್ರಾಮಾಡಳಿತ : 25 ವರ್ಷಗಳಿಂದ ಆಶ್ರಯ ಮನೆಗಾಗಿ ಬಡ ಮಹಿಳೆಯೊಬ್ಬರ ಅಲೆದಾಟ
ಗ್ರಾಮೀಣ ಭಾಗದ ಬಡ ಜನತೆ ಹಾಗೂ ನಿರ್ಗತಿಕರು ತಮ್ಮ ಸ್ವಂತ ವಾಸದ ಮನೆಯಲ್ಲಿ ಬದುಕಲಿ ಎಂಬ ಸದುದ್ದೇಶದಿಂದ ಸರಕಾರ ಆಶ್ರಯ ಯೋಜನೆ ಜಾರಿಗೊಳಿಸಿದ್ದರು ಸಹ ಗ್ರಾಮಾಡಳಿತ ನಿರ್ಲಕ್ಷದಿಂದ ಆಶ್ರಯ ಮನೆಗಾಗಿ ಕಳೆದ 25 ವರ್ಷಗಳಿಂದ ಮಹಿಳೆಯೊಬ್ಬರಿಗೆ ಅಲೆದಾಡಿಸುತ್ತಿದೆ. ಹುಂಚ ಹೋಬಳಿಯ ಅಳಲೆ ಕೊಪ್ಪ ಗ್ರಾಮದ ಮಹಿಳೆ ಇಂದಿರಾ ಎಂಬುವರು ಸಾವಿರಾರು ಬಾರಿ ಗ್ರಾಮಪಂಚಾಯತಿಗೆ ಅಲೆದರು ಸಹ ಅಲ್ಲಿನ ಗ್ರಾಮಾಡಳಿತ ಇದುವರೆಗೂ ಬಡ ಮಹಿಳೆಯ ಮೇಲೆ ಯಾಕೋ ಕರುಣೆಯನ್ನು ತೋರಿಸಿಲ್ಲ. ಸರ್ಕಾರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಗ್ರಾಮಾಡಳಿತದ ಜವಾಬ್ದಾರಿ…