Headlines

Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

Shivamogga: ನಿಂತಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಡಿಕ್ಕಿ – ಚಾಲಕ ಗಂಭೀರ

ಶಿವಮೊಗ್ಗ: ಟಿಪ್ಪರ್ ಲಾರಿಗೆ ಆಂಬುಲೆನ್ಸ್‌ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್‌ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ ಮಲವಗೊಪ್ಪ ಸಮೀಪದಲ್ಲಿ ನಡೆದಿದೆ. ನಿಲ್ಲಿಸಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಗೆ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್ ನಜ್ಜುಗುಜ್ಜಾಗಿದೆ.ಭದ್ರಾವತಿ ಕಡೆಯಿಂದ ಬರುತ್ತಿದ್ದ ಆಂಬುಲೆನ್ಸ್‌  ಮಲವಗೊಪ್ಪದ  ಬಳಿಯಲ್ಲಿ ನಿಂತಿದ್ದ ಟಿಪ್ಪರ್‌ ಲಾರಿಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು,ಆತನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More

ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹರಿಹಾಯ್ದ ಲಗೇಜ್ ಆಟೋ :

ಸಾಗರ: ದ್ವಿಚಕ್ರ ವಾಹನವನ್ನು ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ. ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು ಶುಕ್ರವಾರ ಸಂಜೆ ಲಗೇಜ್ ಆಟೋ ಒಂದು ಅಚಾನಕ್ಕಾಗಿ ರಸ್ತೆಯ ಮಧ್ಯ ಬಂದ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಸ್ಎನ್ ನಗರದ ನಾಲ್ಕನೇ ತಿರುವಿನ ವಾಸಿಗಳಾದ ಆಫ಼್ರೀನ್ ಹಾಗೂ ಶಮ್ರೀನ್ ಎಂಬ …

Read More

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ಮಾಸ್ತಿಕಟ್ಟೆ :  ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಲಿಕಲ್ ಸಮೀಪದಲ್ಲಿ ನಡೆದಿದೆ. ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಅತಿ ವೇಗದಿಂದ  ಓಮ್ನಿ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕನ ಎರಡು ಕಾಲು ತುಂಡಾದ ಘಟನೆ ನಡೆದಿದೆ. ಘಟನೆಯಲ್ಲಿ ಹುಲಿಕಲ್ ನರಸಿಂಹಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಎಂಬುವವರ ಎರಡು…

Read More

ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್‌ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ…

Read More

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಕೇಸ್ : ಸಿಎಂ ಬೊಮ್ಮಾಯಿ ಘೋಷಣೆ

ಭಾಷೆ ನೆಪದಲ್ಲಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಗೂಂಡಾ ಕಾಯ್ದೆ, ದೇಶದ್ರೋಹದ ಕೇಸ್ ದಾಖಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಕೃತ್ಯ ಖಂಡಿಸಿ ವಿಧಾನಸಭೆಯಲ್ಲಿ ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗಿದೆ. ಎಂಇಎಸ್ ವಿರುದ್ಧ ಸರ್ವಾನುಮತದ ಖಂಡನಾ ನಿರ್ಣಯ ಕೂಡ ಅಂಗೀಕರಿಸಲಾಗಿದೆ. ಸುವರ್ಣ ಸೌಧದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಣಿ ಚೆನ್ನಮ್ಮನ ಪ್ರತಿಮೆ ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಎಂಇಎಸ್ ಬ್ಯಾನ್ ಮಾಡಲು ಆಗದಿದ್ದರೂ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು…

Read More

ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯ : ಶಾಸಕ ಹರತಾಳು ಹಾಲಪ್ಪ

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ. ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು. ಮೋದಿಯವರು ದೇಶದ ಸಮಗ್ರತೆಗಾಗಿ…

Read More

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಸೊರಬ: ಚಲಿಸುತ್ತಿದ್ದಾಗ ಧಗ ಧಗನೇ ಹೊತ್ತಿ ಉರಿದ ಕಾರು

ಸೊರಬ :  ತಾಲೂಕಿನ ಚಿಕ್ಕಚೌಟಿಯಿಂದ ಆನವಟ್ಟಿಗೆ ಹೊರಟಿದ್ದ ಮಾರುತಿ ಸ್ವಿಫ್ಟ್ ಡಿಸೈರ್  ಕಾರಿನಲ್ಲಿ ದಟ್ಟನೆ ಹೊಗೆ ಕಾಣಿಸಿಕೊಂಡಿದೆ. ರಾಜು ಎಂಬುವರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದು ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ್ದಾರೆ. ನಿಲ್ಲಿಸಿದ ಕ್ಷಣ ಮಾತ್ರದಲ್ಲಿ ಇಡೀ ವಾಹನಕ್ಕೆ ಧಗ್ಗನೇ ಬೆಂಕಿ ಹೊತ್ತಿಕೊಂಡಿದೆ. ಧಗ ಧಗನೇ ಬೆಂಕಿಗೆ ವಾಹನ ಸಂಪೂರ್ಣ ಹೊತ್ತಿ ಉರಿದಿದೆ. ಅಕ್ಕ ಪಕ್ಕದ ತೋಟದ ಮನೆಯವರು ಬಂದು ಬೆಂಕಿ ಆರಿಸಲು ಯತ್ನಿಸಿದ್ದಾರೆ. ಚಲಿಸುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್‌ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಮೊದಲಿಗೆ ಬ್ಯಾನೆಟ್ ನಲ್ಲಿ…

Read More