Headlines

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು|electric shock

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು ಶಿವಮೊಗ್ಗ : ವಿದ್ಯುತ್‌ ತಂತಿ ತಗುಲಿ ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರ 3ನೇ ಕ್ರಾಸ್ ಬಳಿಯ ರಾಗಿಗುಡ್ಡದಲ್ಲಿ ನಡೆದಿದೆ. ಚಟ್ನಹಳ್ಳಿ ನಿವಾಸಿ ಗಿರೀಶ್ (27) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು…

Read More

ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…

Read More

ಸಮಟಗಾರು ಶಾಲೆಯಲ್ಲಿ ಪ್ರತಿಭಾ ಕಾರಂಜಿ |ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ ಉದ್ಘಾಟನೆ|pratibha karanji

ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ Ripponpet | ಗ್ರಾಮೀಣ ಭಾಗದಲ್ಲಿ ಪ್ರತಿಭಾ ಕಾರಂಜಿಯ ಮಕ್ಕಳ ಕಲೋತ್ಸವವನ್ನು ತಮ್ಮೂರಿನ ಜಾತ್ರೆ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ ಎಂದು ಹುಂಚಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಂಗಲ ದೇವರಾಜ್ ಹೇಳಿದರು. ಹುಂಚ ಗ್ರಾಪಂ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ನಡೆಸಲು ಎಲ್ಲರ ಸಹಕಾರ ಮುಖ್ಯ. ಮಕ್ಕಳು…

Read More

ಐದು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಕಠಿಣ ಶಿಕ್ಷೆ ಪ್ರಕಟ

ತೀರ್ಥಹಳ್ಳಿ : ಐದು ವರ್ಷ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC–II (POCSO) 20 ವರ್ಷ ಕಠಿಣ ಶಿಕ್ಷೆ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2020 ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 05 ವರ್ಷದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವೊಂದು ತನ್ನ ಮನೆಯಲ್ಲಿ ಆಟವಾಡುತ್ತಾ ಇದ್ದಾಗ ವೆಂಕಟೇಶ್ ಎಂಬುವವನು ಸದರಿ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿತ್ತು. ಘಟನೆಯ ಬಗ್ಗೆ…

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ಕಾಡುಕೋಣಗಳ ದಾಳಿಗೆ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು – ರೈತರ ಆಂತಕ|wild corner

ರಿಪ್ಪನ್‌ಪೇಟೆ : ಆರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಡೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ ಫಸಲು ಕಟಾವಿಗೆ ಬಂದಿದ್ದು ರಾತ್ರಿ ಹೊತ್ತಿನಲ್ಲಿ ಕಾಡುಕೋಣ ಜಮೀನಿಗೆ ನುಗ್ಗಿ ಕಟಾವು ಮಾಡಲಾದ ಭತ್ತ ಭೂಮಿ ತಾಯಿಯ ಪಾಲಾಗುವಂತಾಗಿದೆ.ಅಲ್ಲದೆ ಆಡಿಕೆ ಗಿಡಗಳನ್ನು ಮುರಿದು ಹಾಕಿ ಬಾಳೆ ಸಹ ಕೈಗೆ ಸೀಗದಂತಾಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಇAದು…

Read More

Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ

Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ ಬಂಗಾರ ಪಾಲಿಶ್‌ ಹಾಕಿಕೊಡುತ್ತೇವೆ ಎಂದು ಮಹಿಳೆಯರನ್ನು ಯಾಮಾರಿಸುವ ಗ್ಯಾಂಗ್‌ವೊಂದನ್ನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಆನಂದಪುರ ಪೊಲೀಸ್‌ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕುತೂಹಲ ಮೂಡಿಸಿದ ಪ್ರಕರಣದಲ್ಲಿ ಅಜ್ಜಿಗೆ ನಕಲಿ ಚಿನ್ನದ ನಾಣ್ಯಕೊಟ್ಟು ಆಕೆಯ ಬೆಂಡೋಲೆಯನ್ನು ಪಾಲೀಶ್‌ ನೆಪದಲ್ಲಿ ಕದ್ದೊಯ್ದಿದ್ದ ಆರೋಪದ ಅಡಿಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ. ನಡೆದಿದ್ದೇನು..??? ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ …

Read More

ರಿಪ್ಪನ್‌ಪೇಟೆ : ಕಳಪೆ ರಸ್ತೆ ಕಾಮಗಾರಿ ಕಂಡು ಸಿಡಿಮಿಡಿಗೊಂಡ ಶಾಸಕ ಹರತಾಳು ಹಾಲಪ್ಪ |Ripponpet

ರಿಪ್ಪನ್‌ಪೇಟೆ: ಇಲ್ಲಿನ ವಿನಾಯಕ ನಗರದ ದುರ್ಗಾ ಪರಮೇಶ್ವರಿ ದೇವಸ್ಥಾನದ ರಸ್ತೆ ಮತ್ತು ಬಾಕ್ಸ್ ಚರಂಡಿ ಕಾಮಗಾರಿಗೆ 35 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿರುವ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು. ಇಂದು ಕಾಮಗಾರಿ ನಡೆಯುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಕೆಲಸಗಾರರ ಬಳಿ ಎಷ್ಟು ಸಿಮೆಂಟ್ ಹಾಕುತ್ತಿದ್ದೀರಾ ? ಎಂದು ಕೇಳಿದಾಗ ತಡವರಿಸಿ ಕೆಲಸಗಾರ 10 ಚೀಲ ಎಂದು…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More
Exit mobile version