ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | ಬೆಟ್ಟೆ 56 ಸಾವಿರ ,ಸರಕು 83 ಸಾವಿರ – ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ..!??

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | ಬೆಟ್ಟೆ 56 ಸಾವಿರ ,ಸರಕು 83 ಸಾವಿರ  Arecanut Rate today |Shimoga | Sagara |  Arecanut/ Betelnut/ Supari | Date Apr 18, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ …

Read More

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ರಿಪ್ಪನ್‌ಪೇಟೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿಯಲ್ಲಿ ಶುಕ್ರವಾರ ಬೆಳ್ಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ಕಾರ್ಯಕ್ರಮ ಉದ್ಘಾಟಿಸಿ ನಾಗರಿಕರಿಂದ ಮನವಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಬಕಾರಿ ,ಕೃಷಿ ,ಅರಣ್ಯ ,ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರುಗಳು ಅಧಿಕವಾಗಿದ್ದವು. ಸಂಧ್ಯಾ ಸುರಕ್ಷಾ, ಅಂಗವಿಕಲ, ವಿಧವಾ ವೇತನ ಇವುಗಳಿಗೆ ಸಂಬಂಧಪಟ್ಟಂತೆ ಸ್ಥಳದಲ್ಲಿ ಮಂಜೂರಾತಿ ಆದೇಶ ನೀಡಿದರು.  ಗ್ರಾಮೀಣ ಪ್ರದೇಶದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಮಾರಾಟದ ಬಗ್ಗೆ…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು, ಯುಗಾದಿ ಅಮಾವಾಸ್ಯೆ ಅಂಗವಾಗಿ ಸಾರ್ವಜನಿಕರು ಕುಟುಂಬದವರೊಂದಿಗೆ ಸ್ಥಳೀಯ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ಪ್ರಯುಕ್ತ ಮನೆಗಳಲ್ಲಿ ವಿಶೇಷ ಸಿಹಿ ಅಡುಗೆಯನ್ನೂ ತಯಾರಿಸಲಾಗುತ್ತಿದೆ.ಹಿಂದೂಗಳ ಧಾರ್ಮಿಕ ನಂಬಿಕೆ ಪ್ರಕಾರ ಯುಗಾದಿಯು ವರ್ಷದ ಮೊದಲ ಹಬ್ಬವಾಗಿದೆ. ಹೀಗಾಗಿ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ವಾಡಿಕೆ. ಭಾನುವಾರ ಹಬ್ಬ ಆಚರಿಸಲು ಶನಿವಾರವೇ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More

ಮಂಗನಕಾಯಿಲೆಗೆ ಗ್ರಾಮಪಂಚಾಯಿತಿ ಸದಸ್ಯ ಬಲಿ!!!

ಸಾಗರ :  ತಾಲ್ಲೂಕಿನ ಅರಳಗೋಡಿನಲ್ಲಿ ಮಂಗನ ಕಾಯಿಲೆಗೆ ಅಲ್ಲಿನ ಗ್ರಾಮಪಂಚಾಯ್ತಿ ಸದಸ್ಯರೊಬ್ಬರು ಸಾವನ್ನಪ್ಪಿದ್ದಾರೆ. 55 ವರ್ಷದ ರಾಮಸ್ವಾಮಿ ಕರುಮನೆ ಎಂಬುವರು ಮೃತರು. ಕಳೆದ ಎಪ್ರಿಲ್​ 24 ರಂದು ಇವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಜ್ವರ ಇನ್ನೂ ಹೆಚ್ಚಾದ ಕಾರಣ ಹೀಗಾಗಿ ಮಣಿಪಾಲದ ಕಸ್ತೂರಿಬಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಸ್ವಾಮಿಯವರು ಇಂದು  ಮಧ್ಯಾಹ್ನ ದ  ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Read More

ನಿಧನ ವಾರ್ತೆ: ಕೆರೆಹಳ್ಳಿ ಗ್ರಾಮದ ಕೃಷಿಕ ಅಶೋಕ್ ಇನ್ನಿಲ್ಲ

ರಿಪ್ಪನ್ ಪೇಟೆ : ಇಲ್ಲಿಯ ಕೆರೆಹಳ್ಳಿ ಗ್ರಾಮದ ನಿವಾಸಿ ಕೃಷಿಕ ಅಶೋಕ್ (39) ವರ್ಷ ಇವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆನ್ನೆ ದಿನ ಹೃದಯಾಘಾತಕ್ಕೆ ಒಳಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.  ಇವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಟಿ.ಸುಂದರೇಶ್ ಸೇರಿದಂತೆ ಐವರು ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಇವರ ನಿಧನಕ್ಕೆ ರಾಮೇಶ್ವರ ದೇವಸ್ಥಾನದ…

Read More
Exit mobile version