Headlines

ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದ ಪಟ್ಟಣ ಪಂಚಾಯತಿ ಸದಸ್ಯನ ಸದಸ್ಯತ್ವ ವಜಾ|dismiss

ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಗೌಡ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ.  ಜೋಗದ 8ನೇ ವಾರ್ಡ್ ಸದಸ್ಯ ಹರೀಶ್ ಗೌಡ ಬಜಾರ್ ಲೈನ್‍ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಿಗೆ ಮಾಡಿಸಿಕೊಡುವುದಾಗಿ 50 ಸಾವಿರ ರೂ.ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗಾಬರಿಗೊಳಗಾದ ಹರೀಶ್ ಗೌಡ ಹಣವನ್ನು…

Read More

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More

MENs DAY | ಹೊಸನಗರದಲ್ಲಿ ಪುರುಷ ದಿನಾಚರಣೆ ಸಂಭ್ರಮ

ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು…

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ಡೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಇಂದು ಬೆನವಳ್ಳಿ ಗ್ರಾಮದ ಸಿದ್ಧಪ್ಪನ ಗುಡಿ ಹತ್ತಿರ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಬೆಳಿಗ್ಗೆ 10-45 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More

ರಿಪ್ಪನ್ ಪೇಟೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಟಿಪ್ಪರ್ ಚಾಲಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಸಾವನ್ನಪ್ಪಿದ್ದಾನೆ. ಹೊಸನಗರದ ಚರ್ಚ್ ರಸ್ತೆಯ ನಿವಾಸಿಯಾದ ಫ಼ೈಜಲ್(27) ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ.ಈತನು ಕಳೆದ ಮಾರ್ಚ್ ತಿಂಗಳಲ್ಲಿ ವಿವಾಹವಾಗಿದ್ದನು. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ ಗಜಾನನ ವಾಮನ ಸುತಾರ

ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ  ಗಜಾನನ ವಾಮನ ಸುತಾರ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನಕ್ಕೆ ಚಾಲನೆ ನೀಡಿದ ಕೆಚ್ಚೆದೆಯ ಕನ್ನಡತಿ ಅಕ್ಕ ಅನು” ರಿಪ್ಪನ್ ಪೇಟೆ : ಸಮಾಜ ಸೇವೆಯಲ್ಲಿ ಮಾನವೀಯತೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡವರಿಗೆ ಮಾನವೀಯ ಪ್ರೇರಣೆ ಯಾಗಿರುತ್ತದೆ. ಎಂದು ಡಿ ವೈ ಎಸ್ ಪಿ ಗಜಾನನ ವಾಮನಸುತಾರ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ…

Read More

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ಭದ್ರತಾ ತಪಾಸಣೆ

Railway Protection Force and local police conducted a joint security inspection at Shivamogga railway station with dog squad and ASC teams checking platforms, ticket counters, parcel office and waiting halls. ಶಿವಮೊಗ್ಗ : ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಇಂದು ರೈಲ್ವೆ ಭದ್ರತಾ ಪಡೆ (RPF) ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳ ಸೂಚನೆಯ ಮೇರೆಗೆ ನಡೆದ ಈ ವಿಶೇಷ…

Read More

ತರಗತಿಗೆ ಹಾಜರಾಗದೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು : ದೂರು ದಾಖಲು |Exams

ಸಾಗರ : ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಗತಿಗೆ ಹಾಜರಾಗದೆ ಬಿಎಡ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಥಮ ಸೆಮಿಸ್ಟರ್ ನಲ್ಲಿ 37, 2ನೇ ವರ್ಷದಲ್ಲಿ 27 ವಿದ್ಯಾರ್ಥಿಗಳು ಬಿಎಡ್ ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಪ್ರತಿಷ್ಠಾನದ ಕೋಶಾಧ್ಯಕ್ಷ ಕವಲಕೊಡು ವೆಂಕಟೇಶ್ ದೂರು ನೀಡಿದ್ದಾರೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಕೆಲವರು…

Read More
Exit mobile version