Headlines

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು . ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ…

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More

ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ‌ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು ಏನಿದು ಘಟನೆ? ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ,…

Read More

ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ !!!|Sand Mafia

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿ, ಕೆಎ-15-3172, ಕೆಎ-15-ಎ-0957, ಕೆಎ-42-2108 ನೋಂದಣಿ ಸಂಖ್ಯೆ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಈಚಲಕೊಪ್ಪ ಕಿರಣ, ಮುತ್ತಲ ಮಂಜುನಾಥ ಮತ್ತು ರಾಮಚಂದ್ರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ…

Read More

ಮಳೆಯಿಂದ ಹಾನಿಯಾದ ಕುಟುಂಬಗಳನ್ನು ಭೇಟಿ ಮಾಡಿದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು.

    ಸಾಗರ : ತಾಲೂಕಿನ ಹೊಸೂರು ಗ್ರಾಮ ಪಂಚಾಯತಿಯ ನೆದರವಳ್ಳಿ ಗ್ರಾಮದ ವೀರೇಂದ್ರ ಗೌಡ್ರು ಹಾಗೂ ಚಿದಾನಂದ ಗೌಡರ ಕೊಟ್ಟಿಗೆ ಮನೆ  ನಿನ್ನೆ ಬಂದ ಗಾಳಿ ಮಳೆಯ ಆರ್ಭಟಕ್ಕೆ ಹಾನಿಗೊಳಗಾಗಿತ್ತು. ಇಂದು ಸ್ಥಳಕ್ಕೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಭೇಟಿ ನೀಡಿದರು ಸ್ಥಳ ಪರಿಶೀಲಿಸಿದ  ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.  ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕರಾದ ಗಣಪತಿ ಮಂಡಗಳಲೆ ಗ್ರಾಮ ಪಂಚಾಯಿತಿಯ ಸದಸ್ಯರಾದ ಆನಂದ…

Read More

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…

Read More

ರಿಪ್ಪನ್‌ಪೇಟೆ ಮತ್ತು ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಮತ್ತು RAF ಸಿಬ್ಬಂದಿಗಳ ಪಥಸಂಚಲನ – ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH) ಆಯೋಜಿಲಾಗಿತ್ತು.ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಸಾವು – ಸಾವಿನ ಸುತ್ತ ಅನುಮಾನದ ಹುತ್ತ|crime news

ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ  ಹೊಡೆದು ಪರಾರಿಯಾಗಿದ್ದಾರೆ.  ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.  ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ…

Read More