ಅಸಮರ್ಪಕ ರಸ್ತೆ ನಿರ್ವಹಣೆ : ಜೀರಿಗೆಮನೆ ಗ್ರಾಮಸ್ಥರ ದಿಡೀರ್ ಪ್ರತಿಭಟನೆ
ರಿಪ್ಪನ್ ಪೇಟೆ: ಅಸಮರ್ಪಕ ರಸ್ತೆ ನಿರ್ವಹಣೆ ಹಾಗೂ ಹೊಂಡ ಗುಂಡಿಗಳಿಗೆ ತೇಪೆ ಹಾಕುವ ಪ್ರಕ್ರಿಯೆಯಲ್ಲಿ ಲೋಪ ಎಸಗಲಾಗಿದೆ. ಸರಿಯಾದ ರೀತಿಯಲ್ಲಿ ಹೊಂಡ ಗುಂಡಿಗಳನ್ನು ಮುಚ್ಚದೆ ಬೇಕಾಬಿಟ್ಟಿಯಾಗಿ ರಸ್ತೆ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಡಾಂಬರೀಕರಣದ ವಾಹನವನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಮನೆ ಎಂಬಲ್ಲಿ ನಡೆದಿದೆ. ಹಲವಾರು ವರ್ಷಗಳ ಹಿಂದೆ ರಿಪ್ಪನ್ ಪೇಟೆ ಯಿಂದ ಹೆದ್ದಾರಿಪುರ ಮಾರ್ಗವಾಗಿ ಜೀರಿಗೆಮನೆ ವಡಹೊಸಹಳ್ಳಿ ಮಾರ್ಗವನ್ನು ಮಾಡಲಾಗಿತ್ತು. ಆದರೆ ಇದೀಗ ಡಾಂಬರೀಕರಣ ಮಾಡಿ ಕೆಲವು…