Headlines

ರಿಪ್ಪನ್ ಪೇಟೆ ಹೊಸನಗರ ರಸ್ತೆ ನಿವಾಸಿ ಶಫ಼ಿ ಅಹಮದ್ ಬ್ಯಾರಿ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ. ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು….

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read More

ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read More

ಗವಟೂರು ಹೊಳೆಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ಎಳ್ಳಮವಾಸ್ಯೆ ಜಾತ್ರಾ ಮಹೋತ್ಸವ:

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಹೊಳೆಸಿದ್ದೇಶ್ವರ ಸ್ವಾಮಿಯ ಎಳ್ಳಮವಾಸ್ಯೆ ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅಶೀರ್ವಚನ ನೀಡಿದ ಮಳಲಿಮಠದ ಷ.ಬ್ರ.ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಗಳು ಸಂಘಟನೆ ಸದ್ಭಾವನೆಯೊಂದಿಗೆ ಯುವಜನಾಂಗ ಧಾರ್ಮಿಕ ಅಚರಣೆಗಳಲ್ಲಿ ತೊಡಗಿಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು,  ದುಡಿಮೆಯಿಂದ ಗಳಿಸಿದ ಹಣವನ್ನು ದಾನ, ಧರ್ಮಕ್ಕಾಯಕ್ಕೆ ವಿನಿಯೋಗಿಸಿದರೆ ಪುಣ್ಯನಾದರು ಬರುತ್ತದೆ ಅದೇ ಬಚ್ಚಿಟ್ಟರೆ ಪರರ ಪಾಲಾಗುತ್ತದೆ ಈಗಲಾದರೂ ಗಳಿಸಿದ ಸಂಪತ್ತು ಇನ್ನೊಬ್ಬರಿಗೆ ದಾನ…

Read More

ಎಳ್ಳಮವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ರಾಮತೀರ್ಥದಲ್ಲಿ ಮಿಂದೆದ್ದ ಭಕ್ತ ಸಮೂಹ

ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ  ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು. ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದೆದ್ದು, ನದಿ ತೀರದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ…

Read More

ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ

ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ‌ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…

Read More

ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಸಾಮೂಹಿಕ ಗಣಹೋಮ ಮತ್ತು ಸುಮಂಗಲಿ ಪೂಜೆ

ರಿಪ್ಪನ್ ಪೇಟೆ :ಮನುಷ್ಯ ತಂತ್ರಜ್ಞಾನದ ಮೂಲಕ  ಸಂಚರಿಸುತ್ತಿದ್ದಾನೆ. ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಮಾನವೀಯ ಮೌಲ್ಯಗಳೆಂದರೆ ಮನೆಯಲ್ಲಿ ಭಜನೆಗಳು,ದೇವತಾ ಆರಾಧನೆಗಳು, ಮಕ್ಕಳಿಗೆ ವಿಶೇಷವಾಗಿರುವಂತಹ ಧರ್ಮ ಚಿಂತನೆಗಳನ್ನು  ಕಡಿಮೆ ಮಾಡುತ್ತಿದ್ದೇವೆ.ಮಕ್ಕಳನ್ನು ಸಧ್ರಡವಾದ ವ್ಯಕ್ತಿಗಳನ್ನು ಮಾಡಬೇಕಾದರೆ ತಂದೆ ತಾಯಿಗಳಾದವರು ಒಳ್ಳೆಯ ಸಂಸ್ಕಾರವಂತರಾಗಬೇಕಾಗಿದೆ. ಇಂದು ರಾಜಮಹಾರಾಜರ ಚರಿತ್ರೆಯನ್ನು ಹೇಳಬೇಕಾದರೆ ಅವರ ಹಿಂದೆ ಅವರ ತಾಯಿಯ ಪರಿಶ್ರಮ ಎಷ್ಟಿರಬಹುದು ಎಂಬುದನ್ನು ಊಹಿಸಬೇಕಾಗುತ್ತದೆ. ನಾವು ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಿದಾಗ ಸಮಾಜಕ್ಕೆ ಒಳ್ಳೆಯ ವ್ಯಕ್ತಿಯನ್ನು ಕೊಟ್ಟಂತಾಗುತ್ತದೆ, ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕೊಟ್ಟಾಗ ಸಮಾಜ ಸದೃಢವಾಗುತ್ತದೆ. ಅಂತಹ ಸದೃಡವಾದ…

Read More

ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ರಾಮತೀರ್ಥದಲ್ಲಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ: ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ಧ ಅಗಸ್ತ್ಯ ಮಹರ್ಷಿಗಳ ಪುಣ್ಯಾಶ್ರಮವಾದ ಶರ್ಮೀಣ್ಯಾವತಿ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ 40ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 9ನೇ ವರ್ಷದ ವಾರ್ಷಿಕೋತ್ಸವ ಏರ್ಪಡಿಸಲಾಗಿದೆ ಎಂದು ಶ್ರೀ ರಾಮೇಶ್ವರ ದೇವಸ್ಥಾನದ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 8.00 ಗಂಟೆಯಿಂದ ಪ್ರಧಾನ ಪುರೋಹಿತರಾದ ಕೆಂಜಿಗಾಪುರದ ಶ್ರೀಧರ್ ಭಟ್, ಶ್ರೀ ಸತ್ಯನಾರಾಯಣ…

Read More

ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ  ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ  ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಕುವೆಂಪುರವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ : ಎಂ ಬಿ ಲಕ್ಷ್ಮಣಗೌಡ

ರಿಪ್ಪನ್‌ಪೇಟೆ : ಇಲ್ಲಿನ ವಿಶ್ವಮಾನವ ಕಲ್ಯಾಣ ಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮ ದಿನಾಚರಣೆಯನ್ನು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ  ಕೇವಲ ಮನುಷ್ಯ ಅಥವಾ ಮಾನವರಾಗದೆ ವಿಶ್ವಮಾನವರಾಗೋಣ ಎಂದು ಕುವೆಂಪು ಸಂದೇಶ ನೀಡಿದ್ದಾರೆ ಇಂತಹ ಮಹನೀಯರನ್ನು ಭಾವಚಿತ್ರಕ್ಕೆ ಅಷ್ಟೆ ಸೀಮಿತಗೊಳಿಸದೆ ಅವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ,ಆಧ್ಯಾತ್ಮಿಕವಾಗಿ ಧರ್ಮವನ್ನು ರಾಷ್ಟ್ರ ಕವಿ ಕುವೆಂಪು ಅವರು ಒಪ್ಪಿಕೊಂಡಿದ್ದರು…

Read More