Headlines

ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು: ಶಾಸಕ ಗೋಪಾಲಕೃಷ್ಣ ಬೇಳೂರು|gkb

ಹೊಸನಗರ : ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹೊಸನಗರ ತಾಲೂಕಿನಲ್ಲಿ 41 ಪ್ರೌಢಶಾಲೆಗಳಲ್ಲಿ 17 ಶಾಲೆ 100% ಫಲಿತಾಂಶ ಜತೆ…

Read More

ಜನಮನ್ನಣೆ ಗಳಿಸಿರುವ ತೀರ್ಥಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸುಧಾಕರ್ ರವರಿಗೆ ಎರಡನೆ ಬಾರಿ ಒಲಿದ ಮುಖ್ಯಮಂತ್ರಿ ಪದಕ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್  ಸೇವೆ ಸಲ್ಲಿಸುತ್ತಿರುವ ಸುಧಾಕರ್ ಅವರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಮುಖ್ಯಮಂತ್ರಿಗಳ ಪದಕದ ಗೌರವ ಲಭಿಸಿದೆ .ಈ ಪದಕ ಅವರಿಗೆ ಎರಡನೇ ಬಾರಿ ಲಭಿಸುತ್ತಿರುವುದು  ಹೆಮ್ಮೆಯ ವಿಚಾರವಾಗಿದೆ . ಸುಧಾಕರ್ ರವರು ತೀರ್ಥಹಳ್ಳಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಅನೇಕ ಪ್ರಕರಣಗಳಲ್ಲಿ ಕ್ರಿಮಿನಲ್  ಆರೋಪಿಗಳನ್ನು ಪತ್ತೆ ಹಚ್ಚಲು  ಹೆಚ್ಚಿನ ಶ್ರಮವಹಿಸಿದವರಾಗಿದ್ದಾರೆ .ತೀರ್ಥಹಳ್ಳಿಯ  ವ್ಯಾಪ್ತಿಯ ಹತ್ತಾರು ಗಂಭೀರವಾದ ಕ್ರೈಮ್  ಪ್ರಕರಣಗಳಲ್ಲಿ ಕ್ಷಣಮಾತ್ರದಲ್ಲಿ ವಿಷಯವನ್ನು ಸಂಗ್ರಹಿಸಿ ತನಿಖೆಗೆ ಸಹಕರಿಸುವ ವಂತಾಗಲು ,ಆರೋಪಿಗಳನ್ನು…

Read More

ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ

ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ  ಹಲವಾರು…

Read More

ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ ಯುವರಾಜ್ ಗೌಡ ಸ್ಪರ್ಧೆ|election

ಸಾಗರ-ಹೊಸನಗರ ಕ್ಷೇತ್ರಕ್ಕೆ ಬಿ.ಯುವರಾಜ್‌ರವರು ಬಿ.ಜೆ.ಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಸಭೆಯ ಚುನಾವಣೆಗೆ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ. ಅವರು ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಲಿ ಬಿ.ಜೆ.ಪಿ ಜಿಲ್ಲಾ ಸಮಿತಿ ಸದಸ್ಯರು ಹಾಲಿ ಜಿಲ್ಲಾ ಅಖಿಲ ಭಾರತ ವೀರಶೈವ ಮಾಹಾಸಭಾ ಕಾರ್ಯದರ್ಶಿಗಳು ಆಗಿದ್ದು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ತಾಲೂಕು ಬಿ.ಜೆ.ಪಿ. ಅಧ್ಯಕ್ಷರಾಗಿ, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ತಾಲೂಕ ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ನನಗೆ ಬಿಜೆಪಿ ಪಕ್ಷ ಇಲ್ಲಿಯವರೆಗೆ…

Read More

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ ರಿಪ್ಪನ್ ಪೇಟೆ : ಜಿಲ್ಲಾದ್ಯಂತ ನಂಬಿಕೆ ಮತ್ತು ವಿಶ್ವಾಸಕ್ಕೆ ಹೆಸರಾದ ಸಪ್ತಸಿರಿ ಚಿಟ್ ಫಂಡ್ಸ್ ಇದೀಗ ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಶಿವಮೊಗ್ಗ ರಸ್ತೆಯಲ್ಲಿರುವ ಜಯದೇವ ರೈಸ್ ಮಿಲ್ ಕಟ್ಟಡದಲ್ಲಿ ಗ್ರಾಹಕರಿಗಾಗಿ ನೂತನ ಸೇವಾ ಕೇಂದ್ರ ಆರಂಭವಾಗುತ್ತಿದ್ದು, ಡಿಸೆಂಬರ್ 15ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ವರ್ಷಗಳಿಂದ ಚಿಟ್ ಫಂಡ್ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರ, ಸಮಯಪಾಲನೆ ಮತ್ತು ಗ್ರಾಹಕ…

Read More

ಗ್ರಾಮೀಣ ವಿದ್ಯಾರ್ಥಿಗಳ ಕನಸು ನನಸಾಗಿಸಲು ಪ್ರಾಯೋಗಿಕ ತರಗತಿಗಳು ಸಹಕಾರಿ : ಆರಗ ಜ್ಞಾನೇಂದ್ರ – 45 ದಿನಗಳ ಕಾಲ ನಡೆದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಕಾರ್ಯಕ್ರಮ

ಕೋಣಂದೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನಸು ನಿರ್ಮಾಣಗೊಳ್ಳಲು ಪ್ರಾಯೋಗಿಕ ತರಗತಿಗಳು ಸಹಕಾರಿ ಆಗಿದೆ  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ  ಸಮೀಪದ ಗುಡ್ಡೇಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಂಗಳೂರಿನ ಯುವಿಪೆಪ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್  45 ದಿನಗಳ ಕಾಲ ಆಯೋಜಿಸಿದ್ದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ  ಶಾಲೆಯನ್ನು ಆಯ್ದುಕೊಂಡು ,ಆ ಮಕ್ಕಳಲ್ಲಿ ವಿಜ್ಞಾನದ ಅರಿವನ್ನು ಮೂಡಿಸಿ ಭವಿಷ್ಯದ ಆವಿಷ್ಕಾರಕ್ಕೆ ಅಣಿಗೊಳಿಸುವ…

Read More

ಮಗನಿಗಾಗಿ ಮತ್ತೆ ಜೊತೆಯಾದ ತಂದೆ-ತಾಯಿ

ವಿಚ್ಚೇದನ ಪಡೆಯಲು ಮುಂದಾಗಿದ್ದ ತಂದೆ ಮತ್ತು ತಾಯಿಯನ್ನು ಅವರ 10ನೇ ತರಗತಿಯ ಮಗ ಒಂದು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗೆ ಜಿಲ್ಲೆ ಹೊಸನಗರ ತಾಲೂಕಿನ ಕಡೆಗದ್ದೆಯ ನಿವಾಸಿಗಳಾದ ಗಣೇಶಮೂರ್ತಿ ಮತ್ತು ಪೂರ್ಣಿಮಾ ದಂಪತಿ  17 ವರ್ಷಗಳ ಕಾಲ ಸುಖವಾಗಿ ಸಂಸಾರ ನಡೆಸಿದ್ದರು.ಸಣ್ಣದಾದ ಮನಸ್ತಾಪದಿಂದಾಗಿ ಮೂರು ವರ್ಷದ ಹಿಂದೆ ತವರು ಸೇರಿದ್ದ ಪೂರ್ಣಿಮಾ ಮರಳಿ ಗಂಡನ ಮನೆಗೆ ಬಂದಿರಲಿಲ್ಲ. ಕಳೆದ ಮೂರು ವರ್ಷಗಳಿಂದ ದೂರ ಇದ್ದ ದಂಪತಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇತ್ತ…

Read More

ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ

ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ.  ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್​ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…

Read More

ಕಾರು ಅಪಘಾತ – ಸಹಾಯ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವ ಆರಗ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಅಪರಿಚಿತ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿದ್ದ ಶಿವಮೊಗ್ಗದ ನಿವಾಸಿಗಳು ಕಾರ್ಕಳಕ್ಕೆ ಹೋಗುತ್ತಿದ್ದರು‌. ಮಕ್ಕಳ ಪರೀಕ್ಷೆ ಬರೆಸುವ ಕಾರಣಕ್ಕೆ ಶಿವಮೊಗ್ಗದ ಕುಟುಂಬ ಹೋಗುತ್ತಿತ್ತು. ಈ ವೇಳೆ ಅಚಾನಕ್ಕಾಗಿ ರಸ್ತೆ ಪಕ್ಕದ ಚರಂಡಿಗೆ ಅವರ ಕಾರು ಇಳಿದು, ಅದನ್ನು ಮೇಲೆ ತರಲಾಗದೇ ಒದ್ದಾಡುತ್ತಿದ್ದರು. ಈ ಸಂದರ್ಭದಲ್ಲಿ, ಇದೇ ಮಾರ್ಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ದಾರಿಯಲ್ಲಿ ಕಾರು ಅಪಘಾತವಾಗಿದ್ದ ದೃಶ್ಯ ಕಂಡ ತಕ್ಷಣ ತಮ್ಮ ಕಾರು ನಿಲ್ಲಿಸಲು ಡ್ರೈವರ್…

Read More

SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆಗೆ ಚಾಲನೆ ನೀಡಲಾಗಿದೆ. 112, 1098 ಸಹಾಯವಾಣಿ ಜಾಗೃತಿ, ಶಾಲಾ–ಕಾಲೇಜುಗಳ ಬಳಿ ಗಸ್ತು ಕಾರ್ಯಾಚರಣೆ ಮುಖ್ಯ ಗುರಿ. SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ ಶಿವಮೊಗ್ಗ : ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ “ಅಕ್ಕ ಪಡೆ”ಯನ್ನು ರಚಿಸಲಾಗಿದ್ದು, ಸಮಾಜಘಾತುಕ ಶಕ್ತಿಗಳಿಂದ ನಡೆಯುವ ಯಾವುದೇ ರೀತಿಯ ಕಿರುಕುಳ, ದೌರ್ಜನ್ಯ ಹಾಗೂ ಅಸಭ್ಯ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು…

Read More
Exit mobile version