ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More

ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba

ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ…

Read More

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

MENs DAY | ಹೊಸನಗರದಲ್ಲಿ ಪುರುಷ ದಿನಾಚರಣೆ ಸಂಭ್ರಮ

ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು…

Read More

ಸಚಿವ ಈಶ್ವರಪ್ಪಗೆ ಬಿಜೆಪಿಯಿಂದ ಮಹತ್ವದ ಜವಾಬ್ದಾರಿ

ಶಿವಮೊಗ್ಗ : ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.  ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.  ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ…

Read More

ಸೇವಾ ಕಾರ್ಯ ಜನಮಾನಸದಲ್ಲಿ ಉಳಿಯುವಂತಾಗಲು ಸದಾ ಶ್ರಮಿಸಬೇಕು : ಡಾ ಜಿ ಡಿ ನಾರಾಯಣಪ್ಪ|Ripponpet

ರಿಪ್ಪನ್‌ಪೇಟೆ : ಮನುಷ್ಯನ ಹುಟ್ಟು- ಆಕಸ್ಮಿಕ ಸಾವು ನಿಶ್ಚಿತ ಈ ಮಧ್ಯದಲ್ಲಿನ ಬದುಕು ಜನಮಾನಸದಲ್ಲಿ ಉಳಿಯವಂತಾಗಲು ಸದಾ ಶ್ರಮಿಸುವಂತಾಗಬೇಕು ಅಂತಹ ಕಾರ್ಯದಲ್ಲಿ ಜಿ.ಆರ್.ಕೆ.ಮೂರ್ತಿ ಜನಸೇವಾ ಕಾರ್ಯ ಪ್ರಶಂಸನೀಯವೆಂದು ವೈದ್ಯರತ್ನ, ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಹೇಳಿದರು. ಪಟ್ಟಣದ ಜಿ.ಆರ್.ಕೆ.ಮೂರ್ತಿ ಸೇವಾ ಟ್ರಸ್ಟ್ ಗೆಳೆಯರ ಬಳಗ ಇವರ ಸಹಯೋಗದಲ್ಲಿ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಕ್ರೀಡಾಂಗಣದಲ್ಲಿ ಅಯೋಜಿಸಲಾದ ಅಭಿನಂದನಾ ಮಹೋತ್ಸವ ಮತ್ತು ನಗೆಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಮಾನಗಳಲ್ಲಿ ಸ್ವಾರ್ಥ ಮನೋಭಾವನೆಯಿಂದಾಗಿ ನಮ್ಮ ತನವನ್ನು ಮರೆಯುವಂತಾಗಿದೆ. ಸಂಬಂಧಗಳಿಂದಲೂ…

Read More

ಪೋಸ್ಟ್ ಮ್ಯಾನ್ ನ್ಯೂಸ್ ನ ಬಿಗ್ ಇಂಪ್ಯಾಕ್ಟ್:

ಆನಂದಪುರ: ಮೂರು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್   ಸಾಗರ ತಾಲ್ಲೂಕು ಆನಂದಪುರದ ಪೊಲೀಸ್ ವಸತಿ ಗೃಹಗಳು  ಪಾಳುಬಿದ್ದಿವೆ ಎಂದು ಸುದ್ದಿ ಪ್ರಸಾರ ಮಾಡಿತ್ತು.ಈ ಜಾಗ ಅಕ್ರಮ ಚಟುವಟಿಕೆಗಳ ತಾಣವೂ ಆಗಿತ್ತು .ಬಾನೆತ್ತರಕ್ಕೆ ಗಿಡಗಂಟಿಗಳು ಬೆಳೆದಿತ್ತು ಎಂದು ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಇದೀಗ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡಿದ್ದು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೀಗ ಜಾಗವನ್ನು ಸ್ವಚ್ಛಗೊಳಿಸಿ ಗಿಡಗಂಟಿಗಳನ್ನು ಕಡಿದು ಇದೀಗ ಆ ಜಾಗಕ್ಕೆ ಹೊಸ ಕಳೆ ನೀಡುತ್ತಿದ್ದಾರೆ. ವಸತಿ ಗೃಹದ ಒಳಗಡೆಯೂ ಸಹ ಸ್ವಚ್ಚಗೊಳಿಸಿ ಹೊರಗಡೆಯಿಂದ…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕೋಮು ಗಲಾಟೆ – ನಾಲ್ವರಿಗೆ ಗಾಯ|crime

ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಅನ್ಯಕೋಮಿನ ಯುವಕರು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಅಪ್ರಾಪ್ತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಅನ್ಯಕೋಮಿನವರಿಂದ ಹಲ್ಲೆ ನಡೆದಿದೆ. ವೇಗವಾಗಿ ಹಾಗೂ ನಿರ್ಲಕ್ಷದಿಂದ…

Read More

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ. ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ…

Read More