Headlines

ಗಾಂಜಾ ಕೇಸಲ್ಲಿ ಸಾಗರದ MESCOM ಇಂಜಿನಿಯರ್ ಅರೆಸ್ಟ್

ಗಾಂಜಾ ಕೇಸಲ್ಲಿ ಸಾಗರದ MESCOM ಇಂಜಿನಿಯರ್ ಅರೆಸ್ಟ್ | ಹೆಣ್ಣು ಕೊಡದ ಮಾವನನ್ನು ಗಾಂಜಾ ಕೇಸ್ ನಲ್ಲಿ ಸಿಕ್ಕಿಸಲು ಹೋಗಿ ತಾನೇ ತಗ್ಲಾಕೊಂಡ ಸ್ಟೋರಿ ಮದುವೆ ವೈಷ್ಯಮ್ಯದ ಹಿನ್ನಲೆಯಲ್ಲಿ ಮನೆಯೊಂದರ ಕಾಂಪೌಂಡ್ ಒಳಗಡೆ ಗಾಂಜಾ ಎಸೆದು, ಹುಡುಗಿಯ ತಂದೆಯನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಮಾಡಿದಂತ ಪ್ಲಾನ್ ಉಲ್ಟಾ ಆಗಿದೆ. ಈಗ ಯುವತಿಯ ಮನೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಹೋಗಿ, ಮೆಸ್ಕಾಂ ಇಂಜಿನಿಯರ್ ತಾನೇ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಕುರಿತಂತೆ…

Read More

ವ್ಯಸನ ಮುಕ್ತ ಸಮಾಜಕ್ಕಾಗಿ 450 ಕಿಲೋ ಮೀಟರ್ ಪಾದಯಾತ್ರೆ : ಅಥಣಿಯಿಂದ ಹೊಂಬುಜಾ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಬಂದ ಭಕ್ತರ ದಂಡು

ರಿಪ್ಪನ್ ಪೇಟೆ : ಸದೃಢ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಪಣತೊಡಬೇಕು ಎಂಬ ಆಶಯದೊಂದಿಗೆ ಆ ನಿಟ್ಟಿನಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆ ಮೂಲಕ ಜನಜಾಗೃತಿ ಗೊಳಿಸುತ್ತಿರುವುದು  ವಿಶೇಷ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ- ಐನಾಪುರ ಗ್ರಾಮದ ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿ ಪಾದಯಾತ್ರ  ಸಂಘವು   ಈ ಕಾರ್ಯದಲ್ಲಿ ತೊಡಗಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಶ್ರೀ ಕ್ಷೇತ್ರ ಹೊಂಬುಜಕ್ಕೆ  ಸುಮಾರು 450  ಕಿಲೋ ಮೀಟರ್ ಪಾದಯಾತ್ರೆ ಯಲ್ಲಿ ಬಂದು ದರ್ಶನ  ಪಡೆಯುತ್ತಿದ್ದಾರೆ. ಪದ್ಮಾವತಿ ಪಾದಯಾತ್ರಾ…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮಲ್ಲಾಪುರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಮಲ್ಲಾಪುರ ಗ್ರಾಮದ ಬಡ ಮಹಿಳೆ ಯಶೋಧ ಕೋಂ ಗೋಪಾಲ್ ಎಂಬುವವರ ಮನೆ ಸೋಮವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿತ್ತು….

Read More

ಖಾಸಗಿ ಆಸ್ಪತ್ರೆಯ ವೈದ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ|sucide

ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ. ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು…

Read More

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು…

Read More

ಅವ್ಯವಸ್ಥೆಯ ಆಗರ ರಿಪ್ಪನ್ ಪೇಟೆಯ ನಾಡಕಚೇರಿ : ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರ ಹರಸಾಹಸ

ರಿಪ್ಪನ್ ಪೇಟೆ:  ತಾಲ್ಲೂಕಿನಲ್ಲಿಯೇ ಅತೀ ದೊಡ್ಡ ಹೋಬಳಿ ರಿಪ್ಪನ್ ಪೇಟೆ ವ್ಯಾಪ್ತಿಯ ನಾಡಕಛೇರಿಯಲ್ಲಿನ ಅವ್ಯವಸ್ಥೆಯಿಂದ ಜನಸಾಮಾನ್ಯರು ಪ್ರತಿದಿನ ಪರದಾಡುವಂತಾಗಿದೆ. ರಿಪ್ಪನ್ ಪೇಟೆ ಹೋಬಳಿ ವ್ಯಾಪ್ತಿಯು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯ ವಿಧವಾ ವೇತನ, ವೃದ್ಯಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬೆಳೆ ದೃಡೀಕರಣ ಪತ್ರ, ಜಮೀನು ಸರ್ವೇಗಾಗಿ ಭೂ ಮಾಪನಾ ಅರ್ಜಿ ಸಲ್ಲಿಕೆ, ವಾಸಸ್ಥಳ, ವಂಶವೃಕ್ಷ, ಅತ್ಯವಶ್ಯಕ ದೃಡೀಕರಣ ಪತ್ರಗಳು ಸೇರಿ ವಿವಿಧ ಯೋಜನೆಗಳ ಸೌಲಭ್ಯಗಳಿಗಾಗಿ…

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More