ಆಲುವಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ವಾಲಿಬಾಲ್ ಪಂದ್ಯಾವಳಿ : ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ : ವೀರೇಶ್ ಆಲುವಳ್ಳಿ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆಲುವಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ. ಸೋಲು ಗೆಲುವಿನ ಮೊದಲ ಮೆಟ್ಟಿಲು ಎಂಬುದನ್ನು ಅರಿತು ಆಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಸಿದ್ದಿ ವಿನಾಯಕ ಗೆಳೆಯರ ಬಳಗಕ್ಕೆ ಈ ಬಾರಿ ಕೊಟ್ಟಂತಹ ಸಲಹೆ ಸಹಕಾರವನ್ನು ಮುಂದಿನ ಬಾರಿಯು ನೀಡುತ್ತೇನೆ…