Headlines

ಶಿವಮೊಗ್ಗ : ಯುವಕನ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ

 ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಗರದ ಟ್ಯಾಂಕ್‌ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್‌ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ…

Read More

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆ: ಬೆಂಗಳೂರಿನ ಶರವಣಂಗೆ ಮಿಸ್ಟರ್ ಕರ್ನಾಟಕ ಪ್ರಶಸ್ತಿ

ಶಿವಮೊಗ್ಗ: ನಾಡ ಹಬ್ಬ ದಸರಾ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಅದರಂತೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದೇಹಾದಾರ್ಢ್ಯ ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಟ್ಟುಮಸ್ತಾದ ದೇಹವನ್ನು ಪ್ರದರ್ಶಿಸಿದರು. ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಶರವಣಂ ಅವರಿಗೆ ಮಿಸ್ಟರ್ ಕರ್ನಾಟಕ ಅವಾರ್ಡ್ ನೀಡಿ ಗೌರವಿಸಲಾಯಿತು. 55 ರಿಂದ 85 ಕೆಜಿ ಕೆಟಗಿರಿಯ ಒಟ್ಟು…

Read More

ತೀರ್ಥಹಳ್ಳಿ:ಆಸ್ತಿ ವಿಚಾರಕ್ಕೆ ಗಲಾಟೆ – ರಸ್ತೆ ಮಧ್ಯೆದಲ್ಲೇ ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ

ತೀರ್ಥಹಳ್ಳಿ :  ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು   ಬೈಕ್ ನಲ್ಲಿ ಸಾಗುವಾಗ ಮಾರ್ಗ ಮಧ್ಯೆಯೇ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅಕ್ಲಾಪುರದ ನಿವಾಸಿ ರಾಘವೇಂದ್ರ (40)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಕ್ಲಾಪುರದ ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಬೈಕ್ ನಿಲ್ಲಿಸಿ ರಾಘವೇಂದ್ರ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ವಿಚಾರಕ್ಕೆಗಲಾಟೆಯಾಗಿದ್ದು ಇದೆ  ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸುತ್ತೀರಿ! :ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೇ ನೀಡಿರೋ ಗ್ರಾಮೀಣಾಭಿವೃದ್ಧಿ ಸಚಿವರಾಗಿರೋ ಕೆ.ಎಸ್‌ ಈಶ್ವರಪ್ಪ ಶಿಕಾಳಕೊಪ್ಪದಲ್ಲಿ ನಡೆದ ಘಟನೆಯನ್ನ ಖಂಡಿಸಿದಿದ್ದಾರೆ. ಕೆಲವು ಮುಸಲ್ಮಾನರು ಬಹಳ ತಲೆಹರಟೆಗಳಾಗಿದ್ದು,ಅವರೇ ಮುಸ್ಲೀಂರ ಉದ್ದಾರಕರು ಅನ್ನೋ ರೀತಿ ವರ್ತಿಸುತ್ತಿದ್ದಾರೆ. ಇದು ಸರಿಯಲ್ಲ ಎಂದುಹೇಳಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು ಶಿರಾಳಕೊಪ್ಪದಲ್ಲಿ ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ನಡೆಸಿದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿದ ಅವರು ಚೈತ್ರಾ ಕುಂದಾಪುರ ಅವರ ಹೇಳಿಕೆಯನ್ನು ಹಿಂದೂ ಯುವಕನೊಬ್ಬ ಕೇವಲ ಮೊಬೈಲ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದಕ್ಕೆ ಅಂಗಡಿಗೆ ನುಗ್ಗಿ ಹೊಡೆಯುತ್ತಾರೆ…

Read More

ರಿಪ್ಪನ್ ಪೇಟೆ : ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ ಎಂಬ ಬಾಲಿಷ ಹೇಳಿಕೆ ನೀಡಿರುವ ದೇಶದ ಗೃಹ ಮಂತ್ರಿ ಅಮಿತ್ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವತಿಯಿಂದ ರಾಷ್ಟ್ರಪತಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇತ್ತೀಚೆಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಷಾ ಟಿವಿ ಸಂದರ್ಶನವೊಂದರ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ ಪರಿಷತ್ ನ ಅಧ್ಯಕ್ಷರಾಗಿ ಆನಂದ್ ಮೆಣಸೆ ಆಯ್ಕೆ :

ಹೊಸನಗರ : ತಾಲ್ಲೂಕು ವೀರಶೈವ-ಲಿಂಗಾಯತ ಪರಿಷತ್ ನ ಸರ್ವ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ವೀರಶೈವ-ಲಿಂಗಾಯತ ಪರಿಷತ್ ನ ಅಧ್ಯಕ್ಷರಾಗಿ ಆನಂದ್ ಮೆಣಸೆ ರವರು ಆಯ್ಕೆಯಾಗಿದ್ದಾರೆ.  ಪ್ರಧಾನ ಕಾರ್ಯದರ್ಶಿಗಳಾಗಿ ಮಹೇಶ್ ದೇವರಸಲಕಿ,ದೇವು ಹುಳಿಗದ್ದೆ,ಲೋಕೇಶ್ ಶುಂಠಿಕೊಪ್ಪ,ಖಜಾಂಚಿಯಾಗಿ ಚಂದ್ರಶೇಖರ್ ಹಾಲುಗುಡ್ಡೆ,ಉಪಾದ್ಯಕ್ಷರುಗಳಾಗಿ ಜಗದೀಶ್ ಕುಕ್ಕಳಲೆ,ದಯಾಕರ್,ವಿಶ್ವನಾಥ್ ಹೊನ್ನೆಬೈಲು,ಪ್ರವೀಣ್ ಎಂ.ಗುಡ್ಡೆಕೊಪ್ಪ,ಕಮಲಾಕರ್ ಕಮದೂರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಸಚಿನ್ ಗೌಡ ಗರ್ತಿಕೆರೆ,ನಿರಂಜನ್ ರಿಪ್ಪನ್ ಪೇಟೆ,ಟಿ.ಎಲ್ ಷಣ್ಮುಖ,ಶಿವಮೂರ್ತಿ ಹರತಾಳು,ಸುದಾಕರ್ ಬೆನವಳ್ಳಿ.ಹಾಗೂ 26 ಜನ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ಹಾಗೂ ವೀರಶೈವ-ಲಿಂಗಾಯತ ಕಾವಲು ಪರಿಷತ್ತು,ಕಾನೂನು‌‌ ಪರಿಷತ್ತು,ಪ್ರಚಾರ ಪರಿಷತ್ತು ಗಳನ್ನು…

Read More

ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ : ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ:

ಶಿವಮೊಗ್ಗ: ದರಕಾಸ್ತಿನಿಂದ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ವಶಕ್ಕೊಪ್ಪಿಸಲು ಬಿಡದ ಅರಣ್ಯಾಧಿಕಾರಿಗಳ ಅಧಿಕಾರಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಲ್ಲದೇ ನಾಲ್ವರ ಮೇಲೆ ಏಳೆಂಟು ಸುಳ್ಳು ಮೊಕದ್ದಮೆ ದಾಖಲಿಸಿರುವ‌ ಬಗ್ಗೆ ತಾಲೂಕಿನ ದೇವಕಾತಿಕೊಪ್ಪ‌ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇಂದು ಮದ್ಯಾಹ್ನದಿಂದ ಪ್ರತಿಭಟನೆಗಿಳಿದಿದ್ದಾರೆ. ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ115ರಿಂದ 126ರ ವರೆಗಿನ ಭೂಮಿಯಲ್ಲಿ 12ದಲಿತರಿಗೆ 1979ರಲ್ಲಿ ಅಂದಿನ ಸರ್ಕಾರ ತಲಾ 2ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಹಣಿ ಹಾಗೂ ಖಾತೆ ಮಾಡಿ…

Read More

ಹೊಸನಗರ : ಮಾರುತಿಪುರ ಗ್ರಾಪಂ ಮಾಜಿ ಅಧ್ಯಕ್ಷರಾದ ಓಂಕೇಶ್ ಗೌಡ್ರು ನಿಧನ :

ಹೊಸನಗರ : ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಓಂಕೇಶ್ ಗೌಡ್ರು ಸಂಪಳ್ಳಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಓಂಕೇಶ್ ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದು. ಶ್ರೀಯುತರು 20 ವರ್ಷಕ್ಕೂ ಹೆಚ್ಚು ಕಾಲ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ,ಸತತ 2 ಬಾರಿ ಮಾರುತಿಪುರ ಪಂಚಾಯತ್ ಸಂಪಳ್ಳಿ ಕ್ಷೇತ್ರದಿಂದ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರು ಆಯ್ಕೆಯಾಗಿದ್ದರು. ಓಂಕೇಶ  ಗೌಡ್ರು  ಸಂಪಳ್ಳಿ ಅವರ ಅಕಾಲಿಕ ನಿಧನಕ್ಕೆ  ಸಂಬಂಧಿಕರು,ಸ್ನೇಹಿತರೂ…

Read More
Exit mobile version