ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು
ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ…