Headlines

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು| Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು  ಪ್ರದೀಪ್ (30) ಎಂದು ಗುರುತಿಸಲಾಗಿದೆ. ನಡೆದಿದ್ದೇನು..?? ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ…

Read More

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…

Read More

ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga

ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ. ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ…

Read More

Ripponpete | ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ – ಶ್ರೀ ರೇಣುಕಾನಂದ ಸ್ವಾಮೀಜಿ

“ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ’’ ರಿಪ್ಪನ್‌ಪೇಟೆ;-ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ…

Read More

ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರಾಗಿರುವ ಕೆ ದೇವಂದ್ರಪ್ಪ ಇವರಿಗೆ ರಾಜ್ಯಮಟ್ಟದ ಗುರು “ಶ್ರೇಷ್ಠ ಪ್ರಶಸ್ತಿ” ಯನ್ನು ಘೋಷಿಸಲಾಗಿತ್ತು . ಆದರೆ ಕಾರಣಾಂತರಗಳಿಂದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದಲ್ಲಿ ನಡೆದ ರಾಜ್ಯ ಮಟ್ಟದ “ಕನ್ನಡ ನುಡಿ ವೈಭವ -2022” ಕಾರ್ಯಕ್ರಮಕ್ಕೆ ಕೆ ದೇವೆಂದ್ರಪ್ಪನವರು ಪಾಲ್ಗೊಳ್ಳದೇ…

Read More

ಶಿವಮೊಗ್ಗ : ಡೆತ್​ನೋಟ್ ಬರೆದಿಟ್ಟು ಡಿಸಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆ :

ಶಿವಮೊಗ್ಗ: ಕರ್ತವ್ಯದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್​ನೋಟ್ ಬರೆದಿಟ್ಟು ಜಿಲ್ಲಾಧಿಕಾರಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆಯಾಗಿದ್ದಾರೆ. ಗಿರಿರಾಜ್ ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾದವರು. ನನ್ನನ್ನು ಹುಡುಕಬೇಡಿ ಎಂದು ಡೆತ್‌ನೋಟ್​ನಲ್ಲಿ ಬರೆದು ಡಿಸಿ ಕಚೇರಿಯ ಸಹೋದ್ಯೋಗಿಗಳಿಗೆ ಕಳುಹಿಸಿ ನಾಪತ್ತೆಯಾಗಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬಸವನಗುಡಿ ಕ್ವಾರ್ಟರ್ಸ್​ನಿಂದ ನಾಪತ್ತೆಯಾಗಿದ್ದು, ಜಿಲ್ಲಾಡಳಿತ ಹುಡುಕಾಟ ನಡೆಸುತ್ತಿದೆ. 

Read More

ತೀರ್ಥಹಳ್ಳಿ : ಬರಹಗಾರ್ತಿ ಪದ್ಮಜಾ ಜೋಯ್ಸ್ ರವರ “ಕೃಷ್ಣತರಂಗಿಣಿ” ಕೃತಿ ಲೋಕಾರ್ಪಣೆ :

ತೀರ್ಥಹಳ್ಳಿ: ಲೇಖಕ ವಿಷಯವನ್ನು ಗ್ರಹಿಸಿ ತಪಸ್ಸಿನಂತೆ ಬರವಣಿಗೆ ಮಾಡಿದಾಗ ಮಾತ್ರ ಯಶಸ್ವಿಯಾಗುತ್ತಾನೆ. ಸತ್ವಯುತ, ಶಕ್ತಿಯುತವಾದ ಕೃಷ್ಣ ತರಂಗಿಣಿ ಕೃತಿಯಿಂದ ಸಮಾಜ ಸದೃಢವಾಗಲಿ ಎಂದು ಅಖಿಲ ಭಾರತ ಸಾಹಿತ್ಯ ಪರಿಷತ್‌ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಅರೂರು ಅಭಿಪ್ರಾಯಪಟ್ಟರು. ತೀರ್ಥಹಳ್ಳಿ ಪಟ್ಟಣದ ಲಯನ್ಸ್ ಭವನದಲ್ಲಿ ಬೆಂಗಳೂರಿನ ಸ್ನೇಹ ಬುಕ್ ಹೌಸ್ ಪ್ರಸ್ತುತಪಡಿಸಿ ತೀರ್ಥಹಳ್ಳಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಬರಹಗಾರ್ತಿ ದರಲಗೋಡು ಪದ್ಮಜಾ ಜೋಯ್ಸ್ ರವರ ‘ಕೃಷ್ಣ ತರಂಗಿಣಿ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಶ್ರೇಷ್ಠ ಪರಂಪರೆ ನೀಡಿದ ದೇಶ ನಮ್ಮದು,ಸಾಹಿತಿಗಳು ದೇಶವನ್ನು…

Read More

ಹೊಸನಗರಕ್ಕೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಅವಶ್ಯ |ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲ ಧ್ವನಿ

Demand for restoration of Hosanagar Assembly Constituency gains momentum as religious leaders, former ministers, MLAs and citizens unanimously call for a separate constituency to address submergence-affected issues and ensure development. ಹೊಸನಗರ: ಮುಳುಗಡೆ ಸಂತ್ರಸ್ಥರಾದ ಹೊಸನಗರ ತಾಲೂಕಿನ ಜನರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚನೆಯೇ ಏಕೈಕ ಮಾರ್ಗ ಎಂದು ಮೂಲೆಗದ್ದೆ ಮಠದ ಅಭಿನವಚನ್ನಬಸವ ಸ್ವಾಮೀಜಿ ಹೇಳಿದರು. ಹೊಸನಗರ ವಿಧಾನಸಭಾ ಕ್ಷೇತ್ರ…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…

Read More