Headlines

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….

Read More

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…

Read More

ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್

ರಿಪ್ಪನ್‌ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು. ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು…

Read More

ಹೊಸನಗರ ತಾಲೂಕ್ ತಹಶೀಲ್ದಾರ್ ವಿ ಎಸ್ ರಾಜೀವ್ ವರ್ಗಾವಣೆ – ಜಿಲ್ಲೆಯ ಮೂವರು ತಹಶೀಲ್ದಾರ್ ವರ್ಗಾವಣೆ|transfer

ಹೊಸನಗರ ತಾಲೂಕಿನ ತಹಶೀಲ್ದಾರ್ ವಿ ಎಸ್ ರಾಜೀವ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ರಾಜೀವ್ ಸೇರಿದಂತೆ  ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ, ಹೊಸನಗರ ಮತ್ತು ಶಿವಮೊಗ್ಗ ತಹಶೀಲ್ದಾರ್ ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಉಡುಪಿಯ ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದರೆ, ಹೊಸನಗರ ತಾಲೂಕಿನ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಶಿವಮೊಗ್ಗ ತಾಲೂಕು…

Read More

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ ಶಿವಮೊಗ್ಗ: ಮೇವು ಅರಸಿ ಹೊರಟ ಹಸುವೊಂದು ಆಯ ತಪ್ಪಿ ಗುಂಡಿಗೆ ಬಿದ್ದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳ ಸಿಬ್ಬಂದಿ ಹಸುವನ್ನು ಸುರಕ್ಷಿತವಾಗಿ ಮೇಲೆತ್ತಿ ರಕ್ಷಿಸಿದ್ದಾರೆ. ಶಿವಮೊಗ್ಗದ ಹರಿಗೆ ಹಾತಿನಗರದ ಟಿಎಸ್‌ ಡಬ್ಲ್ಯೂ ಕಾಲೋನಿಯಲ್ಲಿ ಬುಧವಾರ ಮಧ್ಯಾಹ್ನ 2.25ರ ಸುಮಾರಿಗೆ ಹಸುವೊಂದು ಮೇವು ಅರಸಿ ಹೋಗುವಾಗ ಮನೆ ಹಿಂದೆ ನೀರಿಗಾಗಿ ತೋಡಿದ್ದ ಸಣ್ಣ ಗುಂಡಿಗೆ ಬಿದ್ದಿದೆ. ಈ ಕುರಿತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿತ್ತು ದೂರು…

Read More

ಶಿವಮೊಗ್ಗ : ಡೆತ್​ನೋಟ್ ಬರೆದಿಟ್ಟು ಡಿಸಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆ :

ಶಿವಮೊಗ್ಗ: ಕರ್ತವ್ಯದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್​ನೋಟ್ ಬರೆದಿಟ್ಟು ಜಿಲ್ಲಾಧಿಕಾರಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆಯಾಗಿದ್ದಾರೆ. ಗಿರಿರಾಜ್ ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾದವರು. ನನ್ನನ್ನು ಹುಡುಕಬೇಡಿ ಎಂದು ಡೆತ್‌ನೋಟ್​ನಲ್ಲಿ ಬರೆದು ಡಿಸಿ ಕಚೇರಿಯ ಸಹೋದ್ಯೋಗಿಗಳಿಗೆ ಕಳುಹಿಸಿ ನಾಪತ್ತೆಯಾಗಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬಸವನಗುಡಿ ಕ್ವಾರ್ಟರ್ಸ್​ನಿಂದ ನಾಪತ್ತೆಯಾಗಿದ್ದು, ಜಿಲ್ಲಾಡಳಿತ ಹುಡುಕಾಟ ನಡೆಸುತ್ತಿದೆ. 

Read More

ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು :

ಕೋಳಿ ಫುಡ್ ತಯಾರಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಹಾರ ಮಿಕ್ಸ್ ಮಾಡುವ ಮಿಷಿನ್ ನಲ್ಲಿ ಕಸ ಸಿಕ್ಕಿಕೊಂಡಿದೆ ಎಂದು ಸ್ವಚ್ಛತೆಗೆ ಮುಂದಾದ ಕಾರ್ಮಿಕ ಮಿಷಿನ್ ಮೇಲೆ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮಿಷಿನ್ ನಿನ ಸ್ವಿಚ್ ಆನ್ ಮಾಡಿ ಹಾರೆಯಿಂದ ತಿವಿದು ಸ್ವಚ್ಛತೆ ಮಾಡುವಾಗ ಆಯತಪ್ಪಿ ಮಿಷಿನ್ ಮೇಲೆ ಬಿದ್ದಿದ್ದಾನೆ. ಆತನ ಹೊಟ್ಟೆಯ ಭಾಗವನ್ನ ಯಂತ್ರ ಇಬ್ಭಾಗ ಮಾಡಿದೆ. ಆತ ಸಾವನ್ನಪ್ಪಿದ್ದಾನೆ. ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ…

Read More

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…

Read More

ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide

ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ. ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ‌ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು…

Read More