Headlines

ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ  ಧ್ವಜಾರೋಹಣ…

Read More

ಸಾಗರ ಪೋಲಿಸರ ಭರ್ಜರಿ ಕಾರ್ಯಾಚರಣೆ : ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಸಾಗರ ನಗರ ಪೊಲೀಸ್‌ ಠಾಣೆಯ ಪೊಲೀಸರು ಮೂವರು ಅಂತರ್‌ ಜಿಲ್ಲಾ ಬೈಕ್ ಕಳ್ಳತನದ ಆರೋಪಿತರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣ,ಭದ್ರಾವತಿ,ಹರಿಹರ ದಾವಣಗೆರೆ ಮತ್ತು ಹಾಸನ ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲಿ ನಡೆದಿದ್ದ ಒಟ್ಟು 6  ಪ್ರಕರಣಗಳನ್ನು ಭೇದಿಸಿ 8ಲಕ್ಷ 20ಸಾವಿ ರೂಗಳ ಮೌಲ್ಯದ 6ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಎ.ಎಸ್.ಪಿ ರೋಹನ್ ಜಗದೀಶ್ ಮತ್ತು ಇನ್ಸ್ ಪೆಕ್ಟರ್ ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ತಿರುಮಲೇಶ್,ಸಾಗರ್ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ್,ಸಂತೋಷ್ ನಾಯ್ಕ್…

Read More

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್ ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ…

Read More

ಮರಕ್ಕೆ ಡಿಕ್ಕಿ ಹೊಡೆದ ಟಾಟಾ ಏಸ್ ವಾಹನ : ಸ್ಥಳದಲ್ಲೇ ಮೂವರ ದುರ್ಮರಣ

ಟಾಟಾಏಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ಮಂಗಳವಾರ ತಡ ರಾತ್ರಿ ನಡೆದಿದೆ. ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13) ಮೃತ ದುರ್ಧೈವಿಗಳು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದು, ವಾಹನ ಚಾಲಕ…

Read More

SAGARA | ಸಾಗರ ನಗರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ

SAGARA | ಸಾಗರ ನಗರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ  ಸಾಗರ : ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿದೆ.‌ ಸದಸ್ಯರೆಲ್ಲರೂ ಬಾವಿಗಿಳಿದು ಹೋರಾಟ ನಡೆಸಿದ್ದಾರೆ. ನಗರಸಭೆಯ ಆಡಳಿತ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಕುಮಾರಿ ಪಲ್ಲವಿ ಸಾತೇನಹಳ್ಳಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆಯಲ್ಲಿ ಭಾಗಿಯಾಗಿದ್ದರು. ಸಾಗರದ ಬಿ.ಹೆಚ್ ರಸ್ತೆಯಲ್ಲಿ ಜಾಗವೊಂದರ ವಿಚಾರದಲ್ಲಿ ಮಾಜಿ ಶಾಸಕರು ಸೇರಿದಂತೆ 14 ಜನರ…

Read More

ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…

Read More

ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…

Read More

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್|election

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಅಬ್ಬರದ ಪ್ರಚಾರ ಮೆರವಣಿಗೆಗಳು ನಡೆಯುತ್ತಿವೆ. ಆದರೆ ಈ ಅಬ್ಬರದ ಪ್ರಚಾರದ ಮಧ್ಯೆ ಒಬ್ಬ ಇಂಜಿನಿಯರ್ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು, ಹಣವಂತರು- ಅಬ್ಬರದ ಪ್ರಚಾರದ ಮಧ್ಯೆ ಟೆಕ್ಕಿ (Techie) ಸರಳ ರೀತಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ.  ಹೌದು ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಬೇಹಳ್ಳಿ ಗ್ರಾಮದ…

Read More

ಹೊಸನಗರ : ಭತ್ತದ ಒಕ್ಕಲು ಯಂತ್ರಕ್ಕೆ ಸಿಲುಕಿ ರೈತನ ಕೈ ಕಟ್|Hosanagar

ಹೊಸನಗರ : ಒಕ್ಕಲು ಮಾಡುವಾಗ ಮಿಷನ್ ಗೆ ಸಿಲುಕಿ ರೈತನ ಕೈ ತುಂಡಾಗಿದೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಹೊಸನಗರ ತಾಲೂಕು ದೇವಗಂಗೆ ಗ್ರಾಮದ ರೈತ ವಿಶ್ವಾನಾಥ್ ಅವರ ಬಲಗೈ ತುಂಡಾಗಿದೆ. ಗ್ರಾಮದ ಮಹೇಶ ಗೌಡ ಎಂಬುವವರ ಜಮೀನಿನಲ್ಲಿ ಭತ್ತದ ಒಕ್ಕಲು ಮಾಡಲಾಗುತ್ತಿತ್ತು. ಈ ವೇಳೆ ವಿಶ್ವನಾಥ್ ಅವರ ಬಲಗೈ ಒಕ್ಕಲು ಯಂತ್ರಕ್ಕೆ ಸಿಲುಕಿ ತುಂಡಾಗಿದೆ. ತಕ್ಷಣ ವಿಶ್ವನಾಥ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More
Exit mobile version