Headlines

ವಕೀಲನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ ಶಿಕಾರಿಪುರ ಸಿಪಿಐ ಅಮಾನತ್ತು :

ತೊಗರ್ಸಿ ಜಾತ್ರೆಯಲ್ಲಿ ವಕೀಲರಿಗೆ ವಿನಾ ಕಾರಣ ಲಾಠಿಯಲ್ಲಿ ಹಲ್ಲೆ ಮಾಡಿದ ಆರೋಪದ ಅಡಿಯಲ್ಲಿ ಶಿಕಾರಿಪುರ ಸಿಪಿಐ ಗುರುರಾಜ್ ಎನ್ ಮೈಲಾರ್ ರವರನ್ನ ಅಮಾನತುಗೊಳಿಸಿ ಆದೇಶಿಸಲಾಗಿದೆ. ದಾವಣಗೆರೆಯ ಪೂರ್ವ ವಲಯ ಪೊಲೀಸ್ ಮಹಾ ನಿರ್ದೇಶಕ ಡಾ.ಕೆ.ತ್ಯಾಗರಾಜ್ ಈ ಆದೇಶವನ್ನು ಹೊರಡಿಸಿದ್ದಾರೆ. ಮಾ.13 ರಂದು ತೊಗರ್ಸಿ ಜಾತ್ರೆಯಲ್ಲಿ ದೇವರ ದರ್ಶನಕ್ಕೆ ಬಂದ ಹಿರೇಕೆರೂರು ಹಂಸಭಾವಿ ಗ್ರಾಮದ ವಕೀಲ ಜಯದೇವ್ ಕೆರೂರು ಇವರ ಮೇಲೆ ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ ಲಾಠಿಯಿಂದ ಹಲ್ಲೆ ನಡೆಸಿರುತ್ತಾರೆ. ದರ್ಶನಕ್ಕೆ ಸಾಲಾಗಿ ಬರುವವರನ್ನು ಬೇಗ ಒಳಗೆ ಬಿಡಿ…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

ರಿಪ್ಪನ್‌ಪೇಟೆ – ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಹೃದಯಾಘಾತದಿಂದ ನಿಧನ|RPET

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿನ ಭಗತ್ ಸಿಂಗ್ ನಗರದ ನಿವಾಸಿ ಕನ್ನಡ ಪರ ಹೋರಾಟಗಾರ ಸಮಾಜ ಸೇವಕ ಹಾಗೂ ಪುನೀತ್ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಶೆಟ್ಟಿ (26) ಇಂದು ಬೆಳಗಿನಜಾವ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನಜಾವ ವಿನಾಯಕ್ ಶೆಟ್ಟಿ ರವರಿಗೆ (ಭಾನುವಾರ) ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತ ವಿನಾಯಕ್ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರಿ, ಓರ್ವ ಸಹೋದರ ಸೇರಿದಂತೆ…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…

Read More

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…

Read More

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ…

Read More

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…

Read More