Headlines

ತೀರ್ಥಹಳ್ಳಿಯಲ್ಲಿ ಹನಿಟ್ರ್ಯಾಪ್ ..! ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ – ಯುವತಿ ಸೇರಿ ಮೂವರ ಬಂಧನ,ನಾಲ್ವರು ಪರಾರಿ|crime news

ತೀರ್ಥಹಳ್ಳಿ ತಾಲೂಕಿನಲ್ಲಿ ಅಶ್ಲೀಲ ವಿಡಿಯೋ ,ವೇಶ್ಯಾವಾಟಿಕೆ ಜಾಲ ಬಯಲು ಬಳಿಕ ಇದೀಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಹನಿಟ್ರ್ಯಾಪ್ ಎಂದು ಹೆಸರಿಡಲಾಗಿದ್ದು ಈ ಪ್ರಕರಣದಲ್ಲಿ ಮೂವರನ್ನ‌ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನಲೆ : ಅರಣ್ಯ ಇಲಾಖೆಯ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೊಬ್ಬರು  ನೀವು ನಮ್ಮ ಸ್ಟುಡಿಯೋ ದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.ಈ ಕರೆ ಅಧಿಕಾರಿ ಮತ್ತು ಮಹಿಳೆಯ ಜೊತೆ ಸಲುಗೆಯಿಂದ ಇರುವಂತೆ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

ಖಾಸಗಿ ವೀಡಿಯೋ ಚಿತ್ರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ – ಪ್ರಕರಣ ದಾಖಲು|cybercrime

ಶಿವಮೊಗ್ಗ : ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ಮತ್ತು ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಸಿ ತನ್ನ ಬಳಿ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿ, ಮಹಿಳೆಯ ಸಂಬಂಧಿಕರಿಗೆ ಆ ಖಾಸಗಿ ಫೋಟೊ, ವಿಡಿಯೋಗಳನ್ನು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಮಹಿಳೆಯೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಬೆಂಗಳೂರಿನಲ್ಲಿದ್ದಾಗ ಮಹಿಳೆಯ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಹಿಳೆಯು ಶಿವಮೊಗ್ಗದಲ್ಲಿ ವಾಸವಿದ್ದು ಆಕೆಗೆ ಕರೆ ಮಾಡಿ ತನ್ನೊಂದಿಗೆ ಬಂದಿರುವಂತೆ ಒತ್ತಡ ಹೇರುತ್ತಿದ್ದ. ಇಲ್ಲದ್ದಿದ್ದರೆ ಸಂಬಂಧಿಕರಿಗೆ ಖಾಸಗಿ…

Read More

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ…

Read More

ತೀರ್ಥಹಳ್ಳಿ ಹೊಸ ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ  ಕಾರ್ಯಗಳನ್ನು ವೀಕ್ಷಿಸಿದರು.  ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು  ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ…

Read More

ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ :

ತೀರ್ಥಹಳ್ಳಿ : ತಾಲೂಕಿನಲ್ಲಿ ಲಂಚವಿಲ್ಲದೆ ಎಲ್ಲೂ ಕೂಡ ಕೆಲಸ ನೆಡೆಯುತ್ತಿಲ್ಲ. ಜ್ಞಾನೇಂದ್ರರವರ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲೂ ಹಗರಣ ಮಾಡಿ ಮೋಸ ಮಾಡಿದರು ಎಂದು ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನೆಡೆಸಿದರು. ಪಟ್ಟಣದ ತಾಲೂಕು ಕಚೇರಿ ಎದುರು ಕೇಂದ್ರ ಬಿಜೆಪಿ  ಸರ್ಕಾರದ ಅವೈಜ್ಞಾನಿಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ  ನೆಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ ಭಾರತೀಯ ಸೇನೆಯಲ್ಲಿ ನೇಮಕಾತಿ ಸಂಬಂಧ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿರುವ ಅಗ್ನಿಪಥ್ ಯೋಜನೆ ಜನವಿರೋಧಿಯಾಗಿದ್ದು ದೇಶದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು…

Read More

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ಸಾಗರ : ಗಾಂಜಾ ಸೇವನೆ ಮಾಡಿದ್ದ ಮೂವರ ಬಂಧನ : ವಿಶೇಷ ಟೆಸ್ಟಿಂಗ್ ಕಿಟ್ ಮೂಲಕ ಪತ್ತೆ :

ಸಾಗರ: ಗಾಂಜಾ ಸೇವಿಸಿದ ಮೂವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಮಾದಕ ವಸ್ತು ಸೇವಿಸಿದ ವಿಚಾರ ದೃಢಪಟ್ಟಿದ್ದು, ಅವರನ್ನು ಎನ್.ಡಿ.ಪಿ.ಎಸ್.ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ತಾಲೂಕಿನ ಆವಿನಹಳ್ಳಿ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು ಸಾಗರ ಗ್ರಾಮಾಂತರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  ಆಗ ಗಾಂಜಾ ಸೇವಿಸಿರಬಹುದು ಎಂಬ ಅನುಮಾನ ಮೂಡಿದೆ.  ನಂತರ ಅವರನ್ನು ಗಾಂಜಾ ಟೆಸ್ಟಿಂಗ್ ಕಿಟ್ ಮೂಲಕ ಪರೀಕ್ಷಿಸಲಾಗಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಸೊರಬ ಮೂಲದ ಶಶಾಂಕ್, ಸುಮಂತ್, ಶಿಕಾರಿಪುರದ ಮಹೇಶ್ ಎಂಬುವವರನ್ನು…

Read More

ವೀಲ್ ಕಟ್ ಆಗಿ ನಿಯಂತ್ರಣ ತಪ್ಪಿ ಅಡಕೆ ತೋಟಕ್ಕೆ ನುಗ್ಗಿದ ಬಸ್ – 25 ಪ್ರಯಾಣಿಕರು ಪಾರು

A private bus lost control after a wheel cut near Sheerihalli village in Shikaripura taluk of Shivamogga district and crashed into an areca nut garden. Over 25 passengers escaped with minor injuries. ವೀಲ್ ಕಟ್ ಆಗಿ ನಿಯಂತ್ರಣ ತಪ್ಪಿ ಅಡಕೆ ತೋಟಕ್ಕೆ ನುಗ್ಗಿದ ಬಸ್ – 25 ಪ್ರಯಾಣಿಕರು ಪಾರು ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದ ಬಳಿ ಖಾಸಗಿ ಬಸ್‌ನ ಚಕ್ರದ…

Read More

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More
Exit mobile version