ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ| ಗ್ರಾಮದ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ:

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್ ಗಳ…

Read More

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ಗಾಳಿಬೈಲು ಗ್ರಾಮದಲ್ಲಿ ಈದ್ ಮಿಲಾದ್ ಸಂಭ್ರಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ…

Read More

ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಹುಟ್ಟೂರಿನಲ್ಲಿ ಆತ್ಮೀಯ ಸನ್ಮಾನ :

ರಿಪ್ಪನ್‌ಪೇಟೆ: ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರರವರನ್ನು ಕಾಂಗ್ರೇಸ್ ಪಕ್ಷ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಕೋಡೂರಿನ ಗ್ರಾಮಸ್ಥರು ಮತ್ತು ಹಿತೈಷಿಗಳು ಸನ್ಮಾನಿಸಿ ಗೌರವಿಸಿದರು. ಕೋಡೂರಿನ ಶ್ರೀಶಂಕ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಕಲಗೋಡು ರತ್ನಾಕರರವರು ಸನ್ಮಾನ ಸ್ವೀಕರಿಸಿ ಮಾತನಾಡಿ ನನ್ನ ಬೆಳವಣಿಗೆಗೆ ಗ್ರಾಮದ ಎಲ್ಲಾ ಹಿರಿಯರ ಆಶೀರ್ವಾದ, ಕಿರಿಯರ ಸಹಕಾರವಿದೆ. ಕಾಂಗ್ರೇಸ್ ಪಕ್ಷದಲ್ಲಿ ಭೂತ್ ಮಟ್ಟದ ಕಾರ್ಯದರ್ಶಿಯಿಂದ ರಾಜ್ಯ ಮಟ್ಟದ ಪ್ರಧಾನಕಾರ್ಯದರ್ಶಿಯವರೆಗೆ ಬೆಳೆಸಿದವರು ನಮ್ಮೂರಿನ ಜನ. ಪಕ್ಷನಿಷ್ಠೆ, ಸಂಘಟನೆ ಮತ್ತು…

Read More

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಲಾಡ್ಜ್ ನಲ್ಲಿ ಸಾವು|real

ಹೊಸನಗರ : ಬೆಂಗಳೂರು ಜಿಲ್ಲೆಯ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮುನಿರಾಜು (48) ಬೆಂಗಳೂರು ಮೂಲದವರಾಗಿದ್ದು ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದರು. ಜನವರಿ 4ರಂದು ಪುಣ್ಯಕ್ಷೇತ್ರಗಳ ಭೇಟಿಗೆ ಎಂದು ಪತ್ನಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಬೆಳಿಗ್ಗೆ ಹೊರಟು ಹೊರನಾಡು ಶೃಂಗೇರಿ ಕ್ಷೇತ್ರದ ದರ್ಶನ ಮಾಡಿ ಹೊಸನಗರ ಬರುವಾಗ ರಾತ್ರಿ ಆಗಿದ್ದ ಕಾರಣ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ರೂಮ್…

Read More