Headlines

ಸಾಗರ ಗ್ರಾಮಾಂತರ ಪೋಲೀಸರ ಭರ್ಜರಿ ಕಾರ್ಯಾಚರಣೆ : ಮನೆಗಳ್ಳತನ ಆರೋಪಿ ಮಾಲು ಸಮೇತ ವಶ

  ಸಾಗರ : ಪಟ್ಟಣದ ಸಮೀಪದ ಆವಿನಹಳ್ಳಿ ಬಸ್ ನಿಲ್ದಾಣದ ಬಳಿ 30 ವರ್ಷದ ವ್ಯಕ್ತಿಯನ್ನು ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಸಾಗರ ಗ್ರಾಮಾಂತರ ವ್ಯಾಪ್ತಿಯ ಮನೆಗಳಲ್ಲಿ ಕಳ್ಳತನ ಮಾಡಿದ್ದು ಗೊತ್ತಾಗಿದೆ. ಈ ವೇಳೆ ಆತನಿಂದ ಬಂಗಾರದ ಬಂಗಾರದ ಆಭರಣ,ಬೆಳ್ಳಿ,ನಗದು ಹಣ ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.ಆರೋಪಿಯಿಂದ ಒಟ್ಟು 4.71.660 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲಾ.ಎಸ್.ಪಿ ಲಕ್ಷ್ಮಿ ಪ್ರಸಾದ್ ಮತ್ತು ಹೆಚ್ಚುವರಿ…

Read More

ಶಿವಮೊಗ್ಗ : ಹುಣಸಗೋಡು ಸ್ಪೋಟ ಪ್ರಕರಣ ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ:

ಶಿವಮೊಗ್ಗ : ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ ಭೂಕಂಪದ ಅನುಭವವಾಗಿತ್ತು….

Read More

ಸರಳವಾಗಿ ನಡೆದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ :

ಶಿವಮೊಗ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜೇನುಕಲ್ಲಮ್ಮ ದೇವಿಯ ಜಾತ್ರೆಯು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನೆರವೇರಿತು. ಮಹಾಲಯ ಸಮಯದಲ್ಲಿ ಜರುಗುವ ಹದಿನೈದು ದಿನಗಳ ಜಾತ್ರಾ ಮಹೋತ್ಸವ ಇದಾಗಿದ್ದು, ಕೊರೋನಾ ಕಾರಣದಿಂದ ಜಾತ್ರಾ ಮಹೋತ್ಸವವು ಕಳೆಗುಂದಿತ್ತು. ಶ್ರೀ ಜೇನುಕಲ್ಲಮ್ಮ ಇರುವುದು ಚಿತ್ತಾಕರ್ಷಕ ಮಲೆನಾಡಿನ ಪ್ರಕೃತಿ ಐಸಿರಿ ನಡುವೆ. ಇಂತಹ ಅಪರೂಪದ ಪ್ರಕೃತಿದತ್ತ ದೇವಸ್ಥಾನವೇ ಶ್ರೀ ಜೇನುಕಲ್ಲಮ್ಮ ಕ್ಷೇತ್ರ.ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಮ್ಮನಘಟ್ಟ ಬೆಟ್ಟವೇ ಜೇನುಕಲ್ಲಮ್ಮ ದೇವಸ್ಥಾನ.  ಮಲೆನಾಡಿನ ತಪ್ಪಲಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

ಸಾಗರ ನಗರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ : ಶಾಸಕ ಹರತಾಳು ಹಾಲಪ್ಪ ರಿಂದ ಕಾರ್ಯಕ್ರಮಕ್ಕೆ ಚಾಲನೆ

ಸಾಗರ : ಇಲ್ಲಿನ ನಗರಸಭೆಯ ಗಾಂಧಿ ಮದಿರದಲ್ಲಿ ಇಂದು ಪೌರ ಕಾರ್ಮಿಕರ ದಿನಾಚರಣೆಗೆ ಶಾಸಕ ಹರತಾಳು ಹಾಲಪ್ಪನವರು ದೀಪಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರ ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ  ವಿತರಿಸಲಾಯಿತು.ಹಾಗೂ ಪೌರ ಕಾರ್ಮಿಕರ ಸಂಘದ ಸಾಗರ ನಗರಸಭೆಯ ಶಾಖೆಯ ಅಧ್ಯಕ್ಷರಾದ AEE ಹೆಚ್.ಕೆ. ನಾಗಪ್ಪ ರವರನ್ನು ಪೌರ ಕಾರ್ಮಿಕರು ಮತ್ತು ಶಾಸಕ ಹಾಲಪ್ಪನವರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು.  ವೇದಿಕೆಯಲ್ಲಿ ನಗರಸಭಾ ಅಧ್ಯಕ್ಷೆ ಮಧುರಾ ಶಿವಾನಂದ್, ಪೌರಾಯುಕ್ತ…

Read More

ಪುರಲೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ : ಒಬ್ಬನ ಸಾವು

 ಶಿವಮೊಗ್ಗ : ಪುರಲೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಪುರಲೆ ಕಡೆಯಿಂದ ಅಭಿಷೇಕ್ ರಾತ್ರಿ ಹೊಸಮನೆ ಬಡಾವಣೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ದ್ವಿಚಕ್ರ ವಾಹನವು ಅಭಿಷೇಕ್ ತೆರಳುತ್ತಿದ್ದ ಬೈಕ್’ಗೆ ಡಿಕ್ಕಿಯಾಗಿದ ಪರಿಣಾಮ  ಅಭಿಷೇಕ್ ತಲೆಗೆ ತೀವ್ರ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಅಭಿಷೇಕ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತನ ಮಾರ್ಗ ಮಧ್ಯದಲ್ಲೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಹೊಸಮನೆ ಬಡಾವಣೆಯ ಅಭಿಷೇಕ್ (23)…

Read More

ಶಿವಮೊಗ್ಗ : ಡೆತ್​ನೋಟ್ ಬರೆದಿಟ್ಟು ಡಿಸಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆ :

ಶಿವಮೊಗ್ಗ: ಕರ್ತವ್ಯದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್​ನೋಟ್ ಬರೆದಿಟ್ಟು ಜಿಲ್ಲಾಧಿಕಾರಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆಯಾಗಿದ್ದಾರೆ. ಗಿರಿರಾಜ್ ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾದವರು. ನನ್ನನ್ನು ಹುಡುಕಬೇಡಿ ಎಂದು ಡೆತ್‌ನೋಟ್​ನಲ್ಲಿ ಬರೆದು ಡಿಸಿ ಕಚೇರಿಯ ಸಹೋದ್ಯೋಗಿಗಳಿಗೆ ಕಳುಹಿಸಿ ನಾಪತ್ತೆಯಾಗಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬಸವನಗುಡಿ ಕ್ವಾರ್ಟರ್ಸ್​ನಿಂದ ನಾಪತ್ತೆಯಾಗಿದ್ದು, ಜಿಲ್ಲಾಡಳಿತ ಹುಡುಕಾಟ ನಡೆಸುತ್ತಿದೆ. 

Read More

ಸೊರಬ: ಬಿಜೆಪಿ ಕೈ ತಪ್ಪಿದ ಪುರಸಭೆ ಅಧ್ಯಕ್ಷ ಸ್ಥಾನ : ಶಾಸಕ ಕುಮಾರ್ ಬಂಗಾರಪ್ಪಗೆ ತೀವ್ರ ಮುಖಭಂಗ

ಶಿವಮೊಗ್ಗ: ಸೊರಬ ಪುರಸಭೆ ಅಧ್ಯಕ್ಷ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ಲಭಿಸಿದೆ. ಪರಿಣಾಮ ಸೊರಬ ಪುರಸಭೆ ಅಧ್ಯಕ್ಷ ಸ್ಥಾನ ಬಿಜೆಪಿ ಕೈ ತಪ್ಪಿದೆ. ಇಂದು ಸೊರಬ ಪುರಸಭೆ ಉಪಾಧ್ಯಕ್ಷೆ ಮಧುರಾ ಜಿ.ಶೇಟ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ನಡೆದ ಅವಿಶ್ವಾಸ ನಿರ್ಣಯದ ಪರ 11 ಮತಗಳು ಲಭ್ಯವಾಗಿದೆ. 12 ಜನ ಸದಸ್ಯರಿರುವ ಪುರಸಭೆಯಲ್ಲಿ ಬಿಜೆಪಿ 6, ಕಾಂಗ್ರೆಸ್​​ 4, ಜೆಡಿಎಸ್​ ಹಾಗೂ ಪಕ್ಷೇತರ ಸದಸ್ಯರು ತಲಾ 1 ಸ್ಥಾನ ಲಭಿಸಿದ್ದು,…

Read More

ಶಿವಮೊಗ್ಗ : ಉಚಿತ ಫ಼್ಯಾಷನ್ ಡಿಸೈನರ್ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗು ಜೀವನೋಪಾಯ ಇಲಾಖೆ,  ಶ್ರೀಕಲಾ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಸಹಯೋಗದಲ್ಲಿ ಆರು ತಿಂಗಳ ಅವಧಿಯ ಉಚಿತ “ಅಸಿಸ್ಟೆಂಟ್ ಫ್ಯಾಷನ್ ಡಿಸೈನರ್ ತರಬೇತಿಗಾಗಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರುವ ಅರ್ಹರನ್ನು ಮಾತ್ರ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಲಾಗುವುದು. ಹದಿನೆಂಟು ವರ್ಷ ಮೇಲ್ಪಟ್ಟು ಮೂವತ್ತೈದು ವರ್ಷದೊಳಗಿನ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ನಂತರ ಶಿಕ್ಷಣಾರ್ಥಿಗಳಿಗೆ ಉದ್ಯೋಗಾವಕಾಶ-ಬ್ಯಾಂಕ್…

Read More

ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್​ಗೆ ಬೆಂಬಲ ನೀಡಿಲ್ಲ : ಸಚಿವ ನಾರಾಯಣಗೌಡ

ಶಿವಮೊಗ್ಗ : ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್​ಗೆ ಬೆಂಬಲ ನೀಡಿಲ್ಲ. ಏಜೆಂಟ್​ಗಳು ಮಾರ್ಕೆಟಿಂಗ್ ಕ್ರೆಡಿಟ್ ಮಾಡೋದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಸಚಿವ ನಾರಾಯಣಗೌಡ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೇನು ಈ ಕಾಯ್ದೆಗಳಿಂದ ತೊಂದರೆಯಾಗುತ್ತಿದೆ? ಪ್ರಧಾನಿ ಮೋದಿ ರೈತರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಿದ್ದಾರೆ. ಬೆಲೆ ಏರಿಕೆ ಮಾಡಿದ್ದಾರೆ ಎಂದರು. ಬಂದ್ ಮಾಡುವ ಅಗತ್ಯ ಇರಲಿಲ್ಲ. ಎಪಿಎಂಸಿ ಕಾಯ್ದೆ ರೈತರಿಗೇನು ನಷ್ಟ ಮಾಡಿಲ್ಲ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಈಗ ಸುಧಾರಣೆ ಆಗಿದೆ. ರೈತರಿಗೆ…

Read More

ಮಾರುತಿಪುರ : ಭೀಕರ ರಸ್ತೆ ಅಪಘಾತ,ಬೈಕ್ ಸವಾರ ಸ್ಥಳದಲ್ಲೆ ಸಾವು!!

ಹೊಸನಗರ : ಇಲ್ಲಿನ ಮಾರುತಿಪುರ ಸಮೀಪ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ಮೂಲದ ಯುವಕ ಬೈಕ್ ನಲ್ಲಿ ಸೊರಬದಿಂದ ಹೊಸನಗರ ಮಾರ್ಗವಾಗಿ ತೆರಳುತ್ತಿರುವಾಗ ಮಾರುತಿಪುರ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಲಾರಿ ಚಾಲಕ ಅಪಘಾತ ಸ್ಥಳದಲ್ಲಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ನಂತರ ಊರಿನ ಗ್ರಾಮಸ್ಥರು ವಾಹನ ಬೆನ್ನಟ್ಟಿ ಬಟ್ಟೆಮಲ್ಲಪ್ಪ ಸಮೀಪ ತಡೆದು…

Read More