ತೀರ್ಥಹಳ್ಳಿ: ನವವಿವಾಹಿತೆಯನ್ನು ಬಲಿ ತೆಗೆದುಕೊಂಡ ನಾಯಿ ಚೈನ್…! ವಾಕಿಂಗ್ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ತೀರ್ಥಹಳ್ಳಿ: ಸಾಕುನಾಯಿಯನ್ನು ಕರೆದುಕೊಂಡು ವಾಯುವಿಹಾರಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನವ ವಿವಾಹಿತೆಯೊಬ್ಬಳು ಕೆರೆಗೆ  ಬಿದ್ದು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕು ಕೈಮರದಲ್ಲಿ ನಡೆದಿದೆ. ನಿಶ್ಮಿತಾ(26) ಮೃತ ವಿವಾಹಿತೆ.ತೀರ್ಥಹಳ್ಳಿಯ ಕೈಮರದ ನಾಗಪ್ಪ ಗೌಡ ಅವರ ಪುತ್ರ ಮಂಜುನಾಥ್ ಅವರ ಪತ್ನಿ ನಿಶ್ಮಿತಾ ಮೂಲತಃ ಹೊಸನಗರ ತಾಲೂಕು ಹುಲಿಕಲ್ ಗ್ರಾಮದವರು. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಶನಿವಾರ ಬೆಳಿಗ್ಗೆ ಸಾಕುನಾಯಿಯನ್ನು ಕರೆದುಕೊಂಡು ವಾಯು ವಿಹಾರಕ್ಕೆ ಹೋಗಿದ್ದಾಳೆ. ಈ ವೇಳೆ ಕರೆದಂಡೆ ಮೇಲೆ ಹೋಗುವಾಗ ನಾಯಿ ಚೈನ್ ಎಳೆದು ಓಡಿದೆ….

Read More

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಶಾಲೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಶಾಲೆ ಆದರೆ ಖಾಸಗಿ ವಿದ್ಯಾಸಂಸ್ಥೆಗಳ ವಾಹನವು ಈ ಭಾಗದ ಹಳ್ಳಿಹಳ್ಳಿಗೆ ನುಗ್ಗಿದ ಪರಿಣಾಮ ಇಂತಹ ಹೆಸರುವಾಸಿ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಹೋಗಿತ್ತು ಇದನ್ನು ಮನಗಂಡ ಊರಿನ ಗ್ರಾಮಸ್ಥರು ವಿಶೇಷ ಆಸಕ್ತಿ ವಹಿಸಿ ಹಲವು ಹೊಸ ದಾಖಲಾತಿಗಳನ್ನು ಸೇರಿಸುವ ಮೂಲಕ ಇಂತಹ ಶಾಲೆಯನ್ನು ಉಳಿಸಿಕೊಂಡಿದ್ದರು ಹಾಗೇಯೆ ಅಲ್ಲಿನ ಶಿಕ್ಷಕರು ಅದಕ್ಕೆ…

Read More

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ ತೀರ್ಥಹಳ್ಳಿ : ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ದಾಸನಗದ್ದೆ ಸಮೀಪದ ಹಿರೇಗದ್ದೆಯಲ್ಲಿ   ಶುಕ್ರವಾರ ತಡ ರಾತ್ರಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವನಿಗೆ ಗಾಯವಾದ ಪ್ರಕರಣದಲ್ಲಿಗ ತೀರ್ಥಹಳ್ಳಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿ ಓರ್ವನನ್ನು ಬಂಧಿಸಲಾಗಿದೆ. ಅಕ್ರಮ ನಾಡ ಬಂದೂಕು ಹೊಂದಿದ್ದು ಮತ್ತು ಕಾಡು ಪ್ರಾಣಿಯನ್ನ ಹಿಡಿಯಲು ಹೋಗಿದ್ದಕ್ಕೆ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಹೋದರರಿಬ್ಬರು ನಾಡ ಬಂದೂಕುಗಳನ್ನ ಹಿಡಿದು ಶಿಕಾರಿಗೆ ಹೋದಾಗ ತಮ್ಮನ ಬಂದೂಕಿನಿಂದ ಹಾರಿದ ಗುಂಡು ಅಣ್ಣನ…

Read More

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ:  ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ  ಶಿವಮೊಗ್ಗದಲ್ಲಿ ನಡೆದಿದ್ದು,  ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್…

Read More

ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ – ನಾಲ್ಕು ವರ್ಷದ ಮಗು ಸೇರಿ ಮೂವರ ಸಾವು|Accident

ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.  ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು.  ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ…

Read More

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಹೊಸನಗರ ರಸ್ತೆಯ ಖಾಸಗಿ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ವಿಷ ಸೇವಿಸಿರುವ ಘಟನೆ ನಡೆದಿದೆ. ಬಿದನೂರು ನಗರ ಸಮೀಪದ ಹೆಂಡೆಗದ್ದೆ ನಿವಾಸಿ ರಾಕೇಶ್ ( 22) ವಿಷ ಸೇವಿಸಿರುವ ಯುವಕನಾಗಿದ್ದಾನೆ. ನಡೆದಿದ್ದೇನು..!?? ಇಂದು ಬೆಳಿಗ್ಗೆ ನಗರ ಮೂಲದ ಯುವಕ ರಾಕೇಶ್ ಖಾಸಗಿ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದು ಮಧ್ಯಾಹ್ನದ ಸಮಯದಲ್ಲಿ ವಿಷ ಸೇವಿಸಿದ್ದಾನೆ ಸ್ವಲ್ಪ ಸಮಯದಲ್ಲಿ ಯುವಕನು ನರಳಾಡುತಿದ್ದದ್ದು ಲಾಡ್ಜ್…

Read More

ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಈಶ್ವರಪ್ಪ  ಮತ್ತೆ ತಮ್ಮ ಹೇಳಿಕೆಯಿಂದ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಬಾರಿಯ ಹೇಳಿಕೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವನ್ನು ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ನೀಡಿದ್ದ ಧ್ವಜದ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ ಈಶ್ವರಪ್ಪ, ಕೇಸರಿ ಧ್ವಜ ಕೆಂಪುಕೋಟೆ ಮೇಲೆ ಕೂಡ ಹಾರಿಸುತ್ತೇವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಮುಂದೆ ನಮ್ಮ ದೇಶದಲ್ಲಿ ಕೇಸರಿ ಧ್ವಜವೇ ರಾಷ್ತ್ರ ಧ್ವಜವಾಗಬಹುದು. ಹಿಂದೆ ರಾಮ ಮಂದಿರ ಕಟ್ಟಲು ಆಗಲ್ಲ ಅಂದಿದ್ದರು ಈಗ ಕಟ್ಟಿಲ್ಲವ, ಹಾಗೇಯೇ ಮುಂದೊಂದು ದಿನ ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದರು. ಅಧಿಕಾರದ…

Read More

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಂದಾಗಿ ಬಾಳೋಣ ಸಿನಿಮಾ ರಿಲೀಸ್ !!!!???? ಸಿನಿಮಾ ಹಿಟ್ ಆಗುತ್ತೋ??? ಪ್ಲಾಪ್ ಆಗುತ್ತೋ ????

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಂದಾಗಿ ಬಾಳೋಣ ಸಿನಿಮಾ ರಿಲೀಸ್ ಆಗಿದ್ದು ಇದು ಹಿಟ್ ಆಗುತ್ತೋ???? ಪ್ಲಾಪ್ ಆಗುತ್ತೋ ??? ಎಂಬುವುದನ್ನು ಕಾದುನೋಡಬೇಕಾಗಿದೆ. ಹೌದು…. ಕಾಂಗ್ರೆಸ್ ನಾಯಕರು ಒಂದಾದ್ರ ?  ಹೀಗೊಂದು ಪ್ರೆಶ್ನೆ ಈಗ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕರು ಎಂದರೆ ಅದು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್. ಇದು ಎಲ್ಲರಿಗೂ ಸಾಮಾನ್ಯವಾಗಿ ಗೊತ್ತಿರುವ ವಿಷಯ. ಆದರೆ ಇತ್ತೀಚಿನ ಕೆಲವು  ತಿಂಗಳುಗಳ  ಹಿಂದೆ ಡಿಸಿಸಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡರು…

Read More

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…

Read More

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More
Exit mobile version