ಹೊಸನಗರ ತಾಲೂಕಿನಲ್ಲಿ ಮಕ್ಕಳ ಅಪಹರಣಕ್ಕೆ ಪ್ರಯತ್ನ ಸುಳ್ಳು ಸುದ್ದಿ | ತಪ್ಪು ಸಂದೇಶ ರವಾನಿಸುವವರ ಮೇಲೆ ಕಠಿಣ ಕ್ರಮ : ಸಿಪಿಐ ಗಿರೀಶ್ ಖಡಕ್ ಎಚ್ಚರಿಕೆ
ಹೊಸನಗರ: ಹೊಸನಗರ ಗ್ರಾಮದಲ್ಲಿ ಮಕ್ಕಳ ಕಳ್ಳ ಸಿಕ್ಕಿಬಿದ್ದು ಓಡಿ ಹೋಗಿದ್ದಾನೆ ಈತ ಸಿಕ್ಕಿದರೆ ಪೊಲೀಸರಿಗೆ ತಿಳಿಸಿ ಎಂಬ ಮಾಹಿತಿ ಸಹಿತ ವ್ಯಕ್ತಿಯೊಬ್ಬನ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಹೊಸನಗರ ಸರ್ಕಲ್ ಇನ್ಸಪೆಕ್ಟರ್ ಗಿರೀಶ್ ಬಿ ಸಿ ಸ್ಪಷ್ಟನೆ ನೀಡಿದ್ದು ಇಂತಹ ಯಾವುದೇ ಪ್ರಕರಣ ತಾಲೂಕಿನಲ್ಲಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ಇಂತಹ ಮಾಹಿತಿಗಳ ಸತ್ಯಾಸತ್ಯತೆ ಅರಿಯಬೇಕು. ಮಾಹಿತಿ ಅರಿಯದೆ ಬೇರೆ ವ್ಯಕ್ತಿಗಳಿಗೆ, ಜಾಲತಾಣದ ಗ್ರೂಪ್ ಗಳಿಗೆ ಫಾರ್ ವರ್ಡ್ (FORWORD) ಮಾಡುವುದು…


