Headlines

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್|rpet

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ  ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್‌ಪೇಟೆಯ ಸಂತೋಷ್(35)  ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…

Read More

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ ಹೊಂದಿದ್ದರೂ ಭಾರತದ ಜನತೆಗೆ ಮೂಲ ಸೌಕರ್ಯಗಳಿಲ್ಲದೇ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಯಲ್ಲಿತ್ತು ಎಂದು ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಇಲ್ಲಿನ ನೆಹರು ಮೈದಾನದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಮತ್ತು ಭಾರತೀಯರು ಬ್ರಿಟಿಷ್ ಆಡಳಿತದ…

Read More

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು| Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು  ಪ್ರದೀಪ್ (30) ಎಂದು ಗುರುತಿಸಲಾಗಿದೆ. ನಡೆದಿದ್ದೇನು..?? ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ…

Read More

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read More

ಕಳಪೆ ಕಾಮಗಾರಿಗೆ ಆರಗ ಜ್ಞಾನೇಂದ್ರ ಉಗ್ರಾವತಾರ – ಬೆಚ್ಚಿ ಬಿದ್ದ ಅಧಿಕಾರಿಗಳು|ಪರ್ಸೆಂಟೇಜ್ ತಿಂದು ನಮಗೆ ಕೆಟ್ಟ ಹೆಸರು ತರ್ತೀರಾ!!|araga

ತೀರ್ಥಹಳ್ಳಿ : ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. …

Read More

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ಗಾಂದೀಜಿ ಮತ್ತು ಶಾಸ್ತ್ರೀಜೀಯವರು ತಮ್ಮ ಸರಳ ಸಜ್ಜನಿಕೆಯಿಂದ ಜನಮಾನಸದಲ್ಲಿದ್ದಾರೆ : ಆರ್ ಎನ್ ಮಂಜುನಾಥ್ | Gandhi jayanthi

ರಿಪ್ಪನ್‌ಪೇಟೆ : ಮಹಾತ್ಮಗಾಂಧಿಜೀ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀಯವರು ಸರಳ ಸಜ್ಜನಿಕೆಯಿಂದ ಪ್ರಪಂಚದ ಜನಮಾನಸದಲ್ಲಿ ಉಳಿದಿದ್ದಾರೆ.ಅದರೆ ಇಂದಿನ ರಾಜಕಾರಣಿಗಳು ಜಾತಿ ಧರ್ಮ ಹಾಗೂ ಭಷ್ಟಾಚಾರವನ್ನೇ ಅಧಾರವಾಗಿಟ್ಟುಕೊಂಡು ಮುನ್ನಡೆಯುತ್ತಿರುವುದು ನಮ್ಮ ರಾಷ್ಟ ನಾಯಕರುಗಳಿಗೆ ಮಾಡಿದಂತಹ ಅವಮಾನ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಆರ್.ಎನ್.ಮಂಜುನಾಥ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿಯ ಕುವೆಂಪು ಸಭಾಂಗಣದಲ್ಲಿ ರಾಷ್ಟç ಪಿತ ಮಹಾತ್ಮ ಗಾಂಧಿಜೀ ಹಾಗೂ ಮಾಜಿ ಪ್ರಧಾನಿ ಭಾರತ ರತ್ನ ಲಾಲ್‌ಬಹದ್ದೂರು ಶಾಸ್ತಿಜೀಯವರ ಜನ್ಮ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಸಾರ್ವಜನಿಕ ಹಣವನ್ನು ಇಂದಿನ…

Read More
Exit mobile version